Homeಮುಖಪುಟಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು ಸೈನಿಕರನ್ನು ಸುತ್ತುವರೆದು, ಪುರುಷರನ್ನು ಬಿಟ್ಟುಬಿಡುವಂತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳಾ ಪ್ರತಿಭಟನಾಕಾರರು, ಮೀರಾ ಪೈಬಿಸ್ (ಉರಿಯುವ ಟಾರ್ಚ್ ಹಿಡಿದವರು) ಎಂದು ಕರೆಯಲ್ಪಡುವ ಸಾಂಸ್ಕೃತಿಕ ಚಳವಳಿಯ ಭಾಗವಾಗಿದ್ದು, ತಮ್ಮ ಸಮುದಾಯದ (ಮೈತೇಯಿ) ಪುರುಷರನ್ನು ಬಿಡುಗಡೆ ಮಾಡುವಂತೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೈನ್ಯವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು, ಬಂಧಿತ 11 ಪುರುಷರು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಹೇಳಿದ್ದು, ಅವರನ್ನು ನಿಶ್ಯಸ್ತ್ರಗೊಳಿಸುವುದರಿಂದ ಜನಾಂಗೀಯ ಉದ್ವಿಗ್ನತೆಯ ನಡುವೆ ಹತ್ತಿರದ ಬೆಟ್ಟಗಳಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ತಮ್ಮ ಗ್ರಾಮವನ್ನು ಆಕ್ರಮಣ ಮಾಡುವ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಘಟನೆಯ ದೃಶ್ಯಗಳು ಸೈನಿಕರನ್ನು ಮಹಿಳೆಯರು ಸುತ್ತಲೂ ತಳ್ಳುತ್ತಿರುವುದನ್ನು ತೋರಿಸುತ್ತವೆ. ಮಹಿಳೆಯರು ಶಸ್ತ್ರಸಜ್ಜಿತ ಸೈನಿಕರ ವಾಹನದ ಮುಂದೆ ನಿಂತು, ಅವರು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳೊಂದಿಗೆ ಪ್ರದೇಶದಿಂದ ಹೊರಹೋಗದಂತೆ ತಡೆದಿದ್ದಾರೆ.

ಪ್ರತಿಭಟನಾಕಾರರು ಕೂಗಾಟ ನಡೆಸಿ,  ವಾಹನವನ್ನು ಸುತ್ತುವರಿದಿದ್ದು, ಗುಂಪನ್ನು ಚದುರಿಸಲು ರಕ್ಷಣಾ ಸಿಬ್ಬಂದಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ. ಅದು ಗುಂಲಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

‘ಎಲ್ಲೂ ಹೋಗಬೇಡ, ಇಲ್ಲೇ ನಿಲ್ಲು, ಇಲ್ಲೇ ನಿಲ್ಲು’ ಎಂದು ಹಿರಿಯ ಮಹಿಳೆಯೊಬ್ಬರು ಇತರರಿಗೆ ಹೇಳುತ್ತಿರುವುದು ಕೇಳಿಸುತ್ತದೆ.

“ನೀವು ಯಾಕೆ ಎಲ್ಲರಿಂದಲೂ ಬಂದೂಕು ತೆಗೆದುಕೊಳ್ಳುವುದಿಲ್ಲ, ನಮ್ಮಿಂದ ಮಾತ್ರ ಏಕೆ?” ಇನ್ನೊಬ್ಬ ಮಹಿಳೆ ಸಸೈನಿಕರನ್ನು ಪ್ರಶ್ನಿಸಿದ್ದಾರೆ.

ಮಣಿಪುರ ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿತು. ನಂತರ ಸೇನೆ ಮತ್ತು ಪೊಲೀಸ್ ತಂಡವು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದ ಅಲ್ಲಿಂದ ತೆರಳಿದೆ. ಆಗಲೂ, ಪ್ರತಿಭಟನಾಕಾರರು ಕಾರು ಹಾಗೂ ರಸ್ತೆಯನ್ನು ತಡೆದರು.

ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟುಗಳು ಮತ್ತು ಕಣಿವೆಯ ಪ್ರಾಬಲ್ಯ ಹೊಂದಿರುವ ಮೈತೇಯಿ ಮೇ 2023 ರಿಂದ ಭೂಮಿ, ಸಂಪನ್ಮೂಲಗಳು, ದೃಢವಾದ ಕ್ರಮ ನೀತಿಗಳು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹಂಚಿಕೊಳ್ಳುವಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಹೋರಾಡುತ್ತಿದ್ದಾರೆ. ಮುಖ್ಯವಾಗಿ ‘ಸಾಮಾನ್ಯ’ ವರ್ಗದ ಮೈತೇಯಿಗಳು ಪರಿಶಿಷ್ಟ ಅಡಿಯಲ್ಲಿ ಸೇರಿಸಲು ಬಯಸುತ್ತಿರುವುದು ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ; ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...