Homeಮುಖಪುಟಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು ಸೈನಿಕರನ್ನು ಸುತ್ತುವರೆದು, ಪುರುಷರನ್ನು ಬಿಟ್ಟುಬಿಡುವಂತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳಾ ಪ್ರತಿಭಟನಾಕಾರರು, ಮೀರಾ ಪೈಬಿಸ್ (ಉರಿಯುವ ಟಾರ್ಚ್ ಹಿಡಿದವರು) ಎಂದು ಕರೆಯಲ್ಪಡುವ ಸಾಂಸ್ಕೃತಿಕ ಚಳವಳಿಯ ಭಾಗವಾಗಿದ್ದು, ತಮ್ಮ ಸಮುದಾಯದ (ಮೈತೇಯಿ) ಪುರುಷರನ್ನು ಬಿಡುಗಡೆ ಮಾಡುವಂತೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೈನ್ಯವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು, ಬಂಧಿತ 11 ಪುರುಷರು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಹೇಳಿದ್ದು, ಅವರನ್ನು ನಿಶ್ಯಸ್ತ್ರಗೊಳಿಸುವುದರಿಂದ ಜನಾಂಗೀಯ ಉದ್ವಿಗ್ನತೆಯ ನಡುವೆ ಹತ್ತಿರದ ಬೆಟ್ಟಗಳಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ತಮ್ಮ ಗ್ರಾಮವನ್ನು ಆಕ್ರಮಣ ಮಾಡುವ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಘಟನೆಯ ದೃಶ್ಯಗಳು ಸೈನಿಕರನ್ನು ಮಹಿಳೆಯರು ಸುತ್ತಲೂ ತಳ್ಳುತ್ತಿರುವುದನ್ನು ತೋರಿಸುತ್ತವೆ. ಮಹಿಳೆಯರು ಶಸ್ತ್ರಸಜ್ಜಿತ ಸೈನಿಕರ ವಾಹನದ ಮುಂದೆ ನಿಂತು, ಅವರು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳೊಂದಿಗೆ ಪ್ರದೇಶದಿಂದ ಹೊರಹೋಗದಂತೆ ತಡೆದಿದ್ದಾರೆ.

ಪ್ರತಿಭಟನಾಕಾರರು ಕೂಗಾಟ ನಡೆಸಿ,  ವಾಹನವನ್ನು ಸುತ್ತುವರಿದಿದ್ದು, ಗುಂಪನ್ನು ಚದುರಿಸಲು ರಕ್ಷಣಾ ಸಿಬ್ಬಂದಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ. ಅದು ಗುಂಲಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

‘ಎಲ್ಲೂ ಹೋಗಬೇಡ, ಇಲ್ಲೇ ನಿಲ್ಲು, ಇಲ್ಲೇ ನಿಲ್ಲು’ ಎಂದು ಹಿರಿಯ ಮಹಿಳೆಯೊಬ್ಬರು ಇತರರಿಗೆ ಹೇಳುತ್ತಿರುವುದು ಕೇಳಿಸುತ್ತದೆ.

“ನೀವು ಯಾಕೆ ಎಲ್ಲರಿಂದಲೂ ಬಂದೂಕು ತೆಗೆದುಕೊಳ್ಳುವುದಿಲ್ಲ, ನಮ್ಮಿಂದ ಮಾತ್ರ ಏಕೆ?” ಇನ್ನೊಬ್ಬ ಮಹಿಳೆ ಸಸೈನಿಕರನ್ನು ಪ್ರಶ್ನಿಸಿದ್ದಾರೆ.

ಮಣಿಪುರ ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿತು. ನಂತರ ಸೇನೆ ಮತ್ತು ಪೊಲೀಸ್ ತಂಡವು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದ ಅಲ್ಲಿಂದ ತೆರಳಿದೆ. ಆಗಲೂ, ಪ್ರತಿಭಟನಾಕಾರರು ಕಾರು ಹಾಗೂ ರಸ್ತೆಯನ್ನು ತಡೆದರು.

ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟುಗಳು ಮತ್ತು ಕಣಿವೆಯ ಪ್ರಾಬಲ್ಯ ಹೊಂದಿರುವ ಮೈತೇಯಿ ಮೇ 2023 ರಿಂದ ಭೂಮಿ, ಸಂಪನ್ಮೂಲಗಳು, ದೃಢವಾದ ಕ್ರಮ ನೀತಿಗಳು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹಂಚಿಕೊಳ್ಳುವಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಹೋರಾಡುತ್ತಿದ್ದಾರೆ. ಮುಖ್ಯವಾಗಿ ‘ಸಾಮಾನ್ಯ’ ವರ್ಗದ ಮೈತೇಯಿಗಳು ಪರಿಶಿಷ್ಟ ಅಡಿಯಲ್ಲಿ ಸೇರಿಸಲು ಬಯಸುತ್ತಿರುವುದು ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ; ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...