Homeಮುಖಪುಟಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು ಸೈನಿಕರನ್ನು ಸುತ್ತುವರೆದು, ಪುರುಷರನ್ನು ಬಿಟ್ಟುಬಿಡುವಂತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳಾ ಪ್ರತಿಭಟನಾಕಾರರು, ಮೀರಾ ಪೈಬಿಸ್ (ಉರಿಯುವ ಟಾರ್ಚ್ ಹಿಡಿದವರು) ಎಂದು ಕರೆಯಲ್ಪಡುವ ಸಾಂಸ್ಕೃತಿಕ ಚಳವಳಿಯ ಭಾಗವಾಗಿದ್ದು, ತಮ್ಮ ಸಮುದಾಯದ (ಮೈತೇಯಿ) ಪುರುಷರನ್ನು ಬಿಡುಗಡೆ ಮಾಡುವಂತೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೈನ್ಯವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು, ಬಂಧಿತ 11 ಪುರುಷರು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಹೇಳಿದ್ದು, ಅವರನ್ನು ನಿಶ್ಯಸ್ತ್ರಗೊಳಿಸುವುದರಿಂದ ಜನಾಂಗೀಯ ಉದ್ವಿಗ್ನತೆಯ ನಡುವೆ ಹತ್ತಿರದ ಬೆಟ್ಟಗಳಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ತಮ್ಮ ಗ್ರಾಮವನ್ನು ಆಕ್ರಮಣ ಮಾಡುವ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಘಟನೆಯ ದೃಶ್ಯಗಳು ಸೈನಿಕರನ್ನು ಮಹಿಳೆಯರು ಸುತ್ತಲೂ ತಳ್ಳುತ್ತಿರುವುದನ್ನು ತೋರಿಸುತ್ತವೆ. ಮಹಿಳೆಯರು ಶಸ್ತ್ರಸಜ್ಜಿತ ಸೈನಿಕರ ವಾಹನದ ಮುಂದೆ ನಿಂತು, ಅವರು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳೊಂದಿಗೆ ಪ್ರದೇಶದಿಂದ ಹೊರಹೋಗದಂತೆ ತಡೆದಿದ್ದಾರೆ.

ಪ್ರತಿಭಟನಾಕಾರರು ಕೂಗಾಟ ನಡೆಸಿ,  ವಾಹನವನ್ನು ಸುತ್ತುವರಿದಿದ್ದು, ಗುಂಪನ್ನು ಚದುರಿಸಲು ರಕ್ಷಣಾ ಸಿಬ್ಬಂದಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ. ಅದು ಗುಂಲಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

‘ಎಲ್ಲೂ ಹೋಗಬೇಡ, ಇಲ್ಲೇ ನಿಲ್ಲು, ಇಲ್ಲೇ ನಿಲ್ಲು’ ಎಂದು ಹಿರಿಯ ಮಹಿಳೆಯೊಬ್ಬರು ಇತರರಿಗೆ ಹೇಳುತ್ತಿರುವುದು ಕೇಳಿಸುತ್ತದೆ.

“ನೀವು ಯಾಕೆ ಎಲ್ಲರಿಂದಲೂ ಬಂದೂಕು ತೆಗೆದುಕೊಳ್ಳುವುದಿಲ್ಲ, ನಮ್ಮಿಂದ ಮಾತ್ರ ಏಕೆ?” ಇನ್ನೊಬ್ಬ ಮಹಿಳೆ ಸಸೈನಿಕರನ್ನು ಪ್ರಶ್ನಿಸಿದ್ದಾರೆ.

ಮಣಿಪುರ ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿತು. ನಂತರ ಸೇನೆ ಮತ್ತು ಪೊಲೀಸ್ ತಂಡವು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದ ಅಲ್ಲಿಂದ ತೆರಳಿದೆ. ಆಗಲೂ, ಪ್ರತಿಭಟನಾಕಾರರು ಕಾರು ಹಾಗೂ ರಸ್ತೆಯನ್ನು ತಡೆದರು.

ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟುಗಳು ಮತ್ತು ಕಣಿವೆಯ ಪ್ರಾಬಲ್ಯ ಹೊಂದಿರುವ ಮೈತೇಯಿ ಮೇ 2023 ರಿಂದ ಭೂಮಿ, ಸಂಪನ್ಮೂಲಗಳು, ದೃಢವಾದ ಕ್ರಮ ನೀತಿಗಳು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹಂಚಿಕೊಳ್ಳುವಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಹೋರಾಡುತ್ತಿದ್ದಾರೆ. ಮುಖ್ಯವಾಗಿ ‘ಸಾಮಾನ್ಯ’ ವರ್ಗದ ಮೈತೇಯಿಗಳು ಪರಿಶಿಷ್ಟ ಅಡಿಯಲ್ಲಿ ಸೇರಿಸಲು ಬಯಸುತ್ತಿರುವುದು ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ; ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...