Homeಮುಖಪುಟಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

ಮಣಿಪುರ: 11 ಶಸ್ತ್ರಸಜ್ಜಿತರನ್ನು ಬಂಧಿಸಿದ ಸೇನಾ ಸಿಬ್ಬಂದಿ; ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಸೇನಾ ಗಸ್ತು ಸಿಬ್ಬಂದಿಯು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿ 11 ಶಸ್ತ್ರಸಜ್ಜಿತ ಪುರುಷರನ್ನು ಪತ್ತೆ ಮಾಡಿ ಬಂಧಿಸಿದ್ದು, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಮಹಿಳಾ ಪ್ರತಿಭಟನಾಕಾರರು ಸೈನಿಕರನ್ನು ಸುತ್ತುವರೆದು, ಪುರುಷರನ್ನು ಬಿಟ್ಟುಬಿಡುವಂತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.

ಮಹಿಳಾ ಪ್ರತಿಭಟನಾಕಾರರು, ಮೀರಾ ಪೈಬಿಸ್ (ಉರಿಯುವ ಟಾರ್ಚ್ ಹಿಡಿದವರು) ಎಂದು ಕರೆಯಲ್ಪಡುವ ಸಾಂಸ್ಕೃತಿಕ ಚಳವಳಿಯ ಭಾಗವಾಗಿದ್ದು, ತಮ್ಮ ಸಮುದಾಯದ (ಮೈತೇಯಿ) ಪುರುಷರನ್ನು ಬಿಡುಗಡೆ ಮಾಡುವಂತೆ ಮತ್ತು ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಸೈನ್ಯವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನಾಕಾರರು, ಬಂಧಿತ 11 ಪುರುಷರು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಹೇಳಿದ್ದು, ಅವರನ್ನು ನಿಶ್ಯಸ್ತ್ರಗೊಳಿಸುವುದರಿಂದ ಜನಾಂಗೀಯ ಉದ್ವಿಗ್ನತೆಯ ನಡುವೆ ಹತ್ತಿರದ ಬೆಟ್ಟಗಳಿಂದ ಶಸ್ತ್ರಸಜ್ಜಿತ ವ್ಯಕ್ತಿಗಳು ತಮ್ಮ ಗ್ರಾಮವನ್ನು ಆಕ್ರಮಣ ಮಾಡುವ ಅಪಾಯವನ್ನು ಎದುರಿಸುತ್ತಾರೆ ಎಂದು ಹೇಳಿದ್ದಾರೆ.

ಮಂಗಳವಾರ ನಡೆದ ಘಟನೆಯ ದೃಶ್ಯಗಳು ಸೈನಿಕರನ್ನು ಮಹಿಳೆಯರು ಸುತ್ತಲೂ ತಳ್ಳುತ್ತಿರುವುದನ್ನು ತೋರಿಸುತ್ತವೆ. ಮಹಿಳೆಯರು ಶಸ್ತ್ರಸಜ್ಜಿತ ಸೈನಿಕರ ವಾಹನದ ಮುಂದೆ ನಿಂತು, ಅವರು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳೊಂದಿಗೆ ಪ್ರದೇಶದಿಂದ ಹೊರಹೋಗದಂತೆ ತಡೆದಿದ್ದಾರೆ.

ಪ್ರತಿಭಟನಾಕಾರರು ಕೂಗಾಟ ನಡೆಸಿ,  ವಾಹನವನ್ನು ಸುತ್ತುವರಿದಿದ್ದು, ಗುಂಪನ್ನು ಚದುರಿಸಲು ರಕ್ಷಣಾ ಸಿಬ್ಬಂದಿ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಆದರೆ. ಅದು ಗುಂಲಿನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ.

‘ಎಲ್ಲೂ ಹೋಗಬೇಡ, ಇಲ್ಲೇ ನಿಲ್ಲು, ಇಲ್ಲೇ ನಿಲ್ಲು’ ಎಂದು ಹಿರಿಯ ಮಹಿಳೆಯೊಬ್ಬರು ಇತರರಿಗೆ ಹೇಳುತ್ತಿರುವುದು ಕೇಳಿಸುತ್ತದೆ.

“ನೀವು ಯಾಕೆ ಎಲ್ಲರಿಂದಲೂ ಬಂದೂಕು ತೆಗೆದುಕೊಳ್ಳುವುದಿಲ್ಲ, ನಮ್ಮಿಂದ ಮಾತ್ರ ಏಕೆ?” ಇನ್ನೊಬ್ಬ ಮಹಿಳೆ ಸಸೈನಿಕರನ್ನು ಪ್ರಶ್ನಿಸಿದ್ದಾರೆ.

ಮಣಿಪುರ ಪೊಲೀಸ್ ತಂಡವು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿತು. ನಂತರ ಸೇನೆ ಮತ್ತು ಪೊಲೀಸ್ ತಂಡವು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ದ ಅಲ್ಲಿಂದ ತೆರಳಿದೆ. ಆಗಲೂ, ಪ್ರತಿಭಟನಾಕಾರರು ಕಾರು ಹಾಗೂ ರಸ್ತೆಯನ್ನು ತಡೆದರು.

ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟುಗಳು ಮತ್ತು ಕಣಿವೆಯ ಪ್ರಾಬಲ್ಯ ಹೊಂದಿರುವ ಮೈತೇಯಿ ಮೇ 2023 ರಿಂದ ಭೂಮಿ, ಸಂಪನ್ಮೂಲಗಳು, ದೃಢವಾದ ಕ್ರಮ ನೀತಿಗಳು ಮತ್ತು ರಾಜಕೀಯ ಪ್ರಾತಿನಿಧ್ಯವನ್ನು ಹಂಚಿಕೊಳ್ಳುವಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಹೋರಾಡುತ್ತಿದ್ದಾರೆ. ಮುಖ್ಯವಾಗಿ ‘ಸಾಮಾನ್ಯ’ ವರ್ಗದ ಮೈತೇಯಿಗಳು ಪರಿಶಿಷ್ಟ ಅಡಿಯಲ್ಲಿ ಸೇರಿಸಲು ಬಯಸುತ್ತಿರುವುದು ಘರ್ಷಣೆಗೆ ಕಾರಣವಾಗಿದೆ.

ಇದನ್ನೂ ಓದಿ; ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...