Homeಮುಖಪುಟಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

ಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

- Advertisement -
- Advertisement -

ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಇಂಫಾಲದಲ್ಲಿರುವ ಸಿಎಂ ಬಿರೇನ್ ಸಿಂಗ್ ಅವರ ಪೂರ್ವಜರ ಮನೆ ಮೇಲೆ ದಾಳಿ ಯತ್ನ ನಡೆದಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಧಿಕಾರಿಗಳು ಯತ್ನವನ್ನು ವಿಫಲಗೊಳಿಸಿದ್ದಾರೆ.

ಕಣಿವೆ ಪ್ರದೇಶದಲ್ಲಿ ಬಿಗಿ ಭದ್ರತೆ ವ್ಯವಸ್ಥೆಗೊಳಿಸಿದ್ದರೂ, ರಾಜ್ಯ ರಾಜಧಾನಿ ಇಂಫಾಲದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಗುಂಪನ್ನು ಚದುರಿಸಲು ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಆರ್ ಎಫ್ ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ.  ಅಧಿಕಾರಿಗಳು ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದರು. ಮನೆಯ ಬಳಿ ಹಿಂದಿನ ಬ್ಯಾರಿಕೇಡ್‌ಗಳಿಗೆ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ರಸ್ತೆಯ ಮಧ್ಯದಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಕುಟುಂಬದ ಮನೆ ಮೇಲೆ ಗುಂಪು ದಾಳಿ ನಡೆದಿದೆ ಎಂಬ ವದಂತಿಗಳು ಸುಳ್ಳು ಹಾಗೂ ತಪ್ಪು ದಾರಿಗೆ ಎಳೆಯುವಂಥದ್ದು ಎಂದು ಮಣಿಪುರ ಪೊಲೀಸರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಂಗ್ ಅವರು ಇಂಫಾಲದ ಕೇಂದ್ರಭಾಗದಲ್ಲಿ ಬಿಗಿ ಭದ್ರತೆ ಇರುವ ಪ್ರತ್ಯೇಕ ಅಧಿಕೃತ ನಿವಾಸದಲ್ಲಿ ವಾಸವಿದ್ದಾರೆ.

”ಇಂಫಾಲದ ಹೀಂಗಾಂಗ್ ಪ್ರದೇಶದಲ್ಲಿರುವ ಮುಖ್ಯಮಂತ್ರಿಯವರ ಪೂರ್ವಜರ ಮನೆ ಮೇಲೆ ಗುಂಪು ದಾಳಿ ನಡೆಸುವ ಪ್ರಯತ್ನ ನಡೆದಿತ್ತು. ಮನೆಯಿಂದ ಸುಮಾರು 100-150 ಮೀಟರ್ ದೂರದಲ್ಲೇ ಭದ್ರತಾ ಪಡೆಗಳು ಈ ಗುಂಪನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮನೆಯಲ್ಲಿ ಯಾರೂ ವಾಸವಿಲ್ಲದಿದ್ದರೂ, ಹಗಲು ರಾತ್ರಿ ಕಾವಲು ವ್ಯವಸ್ಥೆ ಮಾಡಲಾಗಿದೆ. ಎರಡು ಗುಂಪುಗಳಲ್ಲಿ ಜನ ಭಿನ್ನ ದಿಕ್ಕುಗಳಿಂದ ಬಂದು ಮುಖ್ಯಮಂತ್ರಿಯವರ ಪೂರ್ವಜರ ಮನೆ ಸಮೀಪಕ್ಕೆ ಬಂದಿದ್ದರು. ಆದರೆ ಅವರನ್ನು ತಡೆಯಲಾಯಿತು ಎಂದು ವಿವರಿಸಿದ್ದಾರೆ.

ಗುಂಪನ್ನು ಚದುರಿಸಲು ಕ್ಷಿಪ್ರ ಕಾರ್ಯಾಚರಣೆ ಪಡೆ ಪೊಲೀಸರು ಹಲವು ಸುತ್ತುಗಳ ಅಶ್ರುವಾಯು ಶೆಲ್ ಗಳನ್ನು ಸಿಡಿಸಿದರು. ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಅಧಿಕಾರಿಗಳು ಕಡಿತಗೊಳಿಸಿ, ಪ್ರತಿಭಟನಾಕಾರರು ಮುಂದುವರಿಯದಂತೆ ತಡೆದರು. ಮನೆಯ ಬಳಿ ಹೆಚ್ಚುವರಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಯಿತು. ಪಕ್ಕದ ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರುಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಗಾಯಗಳಾದ ಬಗ್ಗೆ ಅಧಿಕೃತ ವರದಿ ಬಂದಿಲ್ಲವಾದರೂ, ಆ್ಯಂಬುಲೆನ್ಸ್ ಗಳ ಓಡಾಟ ಕಂಡುಬಂತು.

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ತೋವ್ರಗೊಂಡಿದೆ. ಇದಕ್ಕೂ ಮುನ್ನ ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಡಿಸಿ ಕಚೇರಿಯನ್ನು ಪ್ರತಿಭಟನಾನಿರತರು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೈತಿ ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ಪ್ರತಿಭಟನೆ: ಮಣಿಪುರದಲ್ಲಿ ಪುನಃ ಇಂಟರ್‌ನೆಟ್‌ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...