Homeಮುಖಪುಟಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

ಮಣಿಪುರ: ಸಿಎಂ ಕುಟುಂಬದ ಮನೆ ಮೇಲೆ ದಾಳಿಗೆ ಯತ್ನ

- Advertisement -
- Advertisement -

ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಇಂಫಾಲದಲ್ಲಿರುವ ಸಿಎಂ ಬಿರೇನ್ ಸಿಂಗ್ ಅವರ ಪೂರ್ವಜರ ಮನೆ ಮೇಲೆ ದಾಳಿ ಯತ್ನ ನಡೆದಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಧಿಕಾರಿಗಳು ಯತ್ನವನ್ನು ವಿಫಲಗೊಳಿಸಿದ್ದಾರೆ.

ಕಣಿವೆ ಪ್ರದೇಶದಲ್ಲಿ ಬಿಗಿ ಭದ್ರತೆ ವ್ಯವಸ್ಥೆಗೊಳಿಸಿದ್ದರೂ, ರಾಜ್ಯ ರಾಜಧಾನಿ ಇಂಫಾಲದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಗುಂಪನ್ನು ಚದುರಿಸಲು ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಆರ್ ಎಫ್ ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ.  ಅಧಿಕಾರಿಗಳು ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದರು. ಮನೆಯ ಬಳಿ ಹಿಂದಿನ ಬ್ಯಾರಿಕೇಡ್‌ಗಳಿಗೆ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ರಸ್ತೆಯ ಮಧ್ಯದಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಕುಟುಂಬದ ಮನೆ ಮೇಲೆ ಗುಂಪು ದಾಳಿ ನಡೆದಿದೆ ಎಂಬ ವದಂತಿಗಳು ಸುಳ್ಳು ಹಾಗೂ ತಪ್ಪು ದಾರಿಗೆ ಎಳೆಯುವಂಥದ್ದು ಎಂದು ಮಣಿಪುರ ಪೊಲೀಸರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಂಗ್ ಅವರು ಇಂಫಾಲದ ಕೇಂದ್ರಭಾಗದಲ್ಲಿ ಬಿಗಿ ಭದ್ರತೆ ಇರುವ ಪ್ರತ್ಯೇಕ ಅಧಿಕೃತ ನಿವಾಸದಲ್ಲಿ ವಾಸವಿದ್ದಾರೆ.

”ಇಂಫಾಲದ ಹೀಂಗಾಂಗ್ ಪ್ರದೇಶದಲ್ಲಿರುವ ಮುಖ್ಯಮಂತ್ರಿಯವರ ಪೂರ್ವಜರ ಮನೆ ಮೇಲೆ ಗುಂಪು ದಾಳಿ ನಡೆಸುವ ಪ್ರಯತ್ನ ನಡೆದಿತ್ತು. ಮನೆಯಿಂದ ಸುಮಾರು 100-150 ಮೀಟರ್ ದೂರದಲ್ಲೇ ಭದ್ರತಾ ಪಡೆಗಳು ಈ ಗುಂಪನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಭದ್ರತಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮನೆಯಲ್ಲಿ ಯಾರೂ ವಾಸವಿಲ್ಲದಿದ್ದರೂ, ಹಗಲು ರಾತ್ರಿ ಕಾವಲು ವ್ಯವಸ್ಥೆ ಮಾಡಲಾಗಿದೆ. ಎರಡು ಗುಂಪುಗಳಲ್ಲಿ ಜನ ಭಿನ್ನ ದಿಕ್ಕುಗಳಿಂದ ಬಂದು ಮುಖ್ಯಮಂತ್ರಿಯವರ ಪೂರ್ವಜರ ಮನೆ ಸಮೀಪಕ್ಕೆ ಬಂದಿದ್ದರು. ಆದರೆ ಅವರನ್ನು ತಡೆಯಲಾಯಿತು ಎಂದು ವಿವರಿಸಿದ್ದಾರೆ.

ಗುಂಪನ್ನು ಚದುರಿಸಲು ಕ್ಷಿಪ್ರ ಕಾರ್ಯಾಚರಣೆ ಪಡೆ ಪೊಲೀಸರು ಹಲವು ಸುತ್ತುಗಳ ಅಶ್ರುವಾಯು ಶೆಲ್ ಗಳನ್ನು ಸಿಡಿಸಿದರು. ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಅಧಿಕಾರಿಗಳು ಕಡಿತಗೊಳಿಸಿ, ಪ್ರತಿಭಟನಾಕಾರರು ಮುಂದುವರಿಯದಂತೆ ತಡೆದರು. ಮನೆಯ ಬಳಿ ಹೆಚ್ಚುವರಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಯಿತು. ಪಕ್ಕದ ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರುಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಗಾಯಗಳಾದ ಬಗ್ಗೆ ಅಧಿಕೃತ ವರದಿ ಬಂದಿಲ್ಲವಾದರೂ, ಆ್ಯಂಬುಲೆನ್ಸ್ ಗಳ ಓಡಾಟ ಕಂಡುಬಂತು.

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ತೋವ್ರಗೊಂಡಿದೆ. ಇದಕ್ಕೂ ಮುನ್ನ ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಡಿಸಿ ಕಚೇರಿಯನ್ನು ಪ್ರತಿಭಟನಾನಿರತರು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮೈತಿ ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ಪ್ರತಿಭಟನೆ: ಮಣಿಪುರದಲ್ಲಿ ಪುನಃ ಇಂಟರ್‌ನೆಟ್‌ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...