Homeಮುಖಪುಟಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

ಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

- Advertisement -
- Advertisement -

ಚುನಾವಣಾ ಫಲಿತಾಂಶ ಬಂದು ಹತ್ತು ದಿನಗಳ ನಂತರ ಮಣಿಪುರ ಮುಖ್ಯಮಂತ್ರಿ ಆಯ್ಕೆ ಹೊರಬಿದ್ದಿದೆ. ಮಣಿಪುರ ಬಿಜೆಪಿ ನಾಯಕರುಗಳಾದ ಎನ್ ಬೀರೆನ್ ಸಿಂಗ್, ಬಿಸ್ವಜಿತ್‌ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನೆಡೆದಿತ್ತು. ಈ ಮೂವರು ನಾಯಕರು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರನ್ನು ಬೇಟಿ ಮಾಡಿ ಚರ್ಚಸಿದ ನಂತರ ಎನ್. ಬೀರೆನ್‌ ಸಿಂಗ್‌ ಅವರನ್ನು ಎರಡನೇ ಬಾರಿ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇಂದು ಮಣಿಪುರಕ್ಕೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಕಿರಣ್‌ ರಿಜಿಜು ಅವರು ಮುಖ್ಯಮಂತ್ರಿ ಘೋಷಣೆ ಮಾಡಲು ರಾಜ್ಯದ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ.

ಇದನ್ನೂ ಓದಿ: MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

ಮಣಿಪುರದಲ್ಲಿ ಮಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಪ್ರಚಾರವನ್ನು ಮಾಡಿತ್ತು. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ ಬೀರೆನ್ ಸಿಂಗ್ (61) ಮಣಿಪುರದಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದರು. ಪಕ್ಷದ ಇನ್ನೊಬ್ಬ ನಾಯಕರಾದ ಬಿಸ್ವಜಿತ್‌ ಸಿಂಗ್‌ ಕೂಡ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು ಮತ್ತು ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು. ಆದರೆ 2017 ರ ಚುನಾವಣೆಯ ನಂತರ ಬೀರೆನ್‌‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನ ಸಭೆಯ 60 ಕ್ಷೇತ್ರಗಳಲ್ಲಿ 32 ಸ್ಥಾನಗಳನ್ನು ಸರಳ ಬಹುಮತದ ಮೂಲಕ ರಾಜ್ಯವನ್ನು ಗೆದ್ದ ಬಿಜೆಪಿ, ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ನೀರಿಕ್ಷಿಸಿ ಮುಖ್ಯಮಂತ್ರಿಯ ಆಯ್ಕೆಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಈ ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಸಹ ಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಬಿಜೆಪಿಯ ಕೇಂದ್ರ ನಾಯಕತ್ವ ನಿನ್ನೆ ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು.

ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಭಾರತೀಯ ಸೈನ್ಯಕ್ಕೆ ಮಣಿಪುರ ನಾಗರಿಕರ ಮೇಲೆ ವ್ಯಾಪಕ ಅಧಿಕಾರವನ್ನು ನೀಡುವ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA)ಯನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಮಣಿಪುರ ಚುನಾವಣೆಯಲ್ಲಿ ಬಿರೇನ್ ಸಿಂಗ್ ಹೇಳಿದ್ದರು. ಅವರು ರಾಜ್ಯದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಸಮತೋಲನ ವಿಧಾನವನ್ನು ಆಯ್ಕೆ ಮಾಡುವ ಭರವಸೆ ನೀಡಿದ್ದರು.

ಬಿರೇನ್ ಸಿಂಗ್ ಅವರು ತಮ್ಮ ವೃತ್ತಿಜೀವನವನ್ನು ಫುಟ್ಬಾಲ್ ಆಟಗಾರರಾಗಿ ಪ್ರಾರಂಭಿಸಿ ನಂತರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ನೇಮಕಗೊಂಡು ಅವಧಿ ಮುಗಿದ ನಂತರ ಬಿಎಸ್‌ಎಫ್ ತೊರೆದು ಪತ್ರಕರ್ತರಾದರು. ಯಾವುದೇ ರೀತಿಯ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿ 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

2002 ರಲ್ಲಿ ರಾಜಕೀಯಕ್ಕೆ ಸೇರಿ ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಹಾಗೆಯೇ 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿ, 2017 ರಲ್ಲಿ ಮತ್ತೆ ತಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...