Homeಮುಖಪುಟಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

ಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

- Advertisement -
- Advertisement -

ಚುನಾವಣಾ ಫಲಿತಾಂಶ ಬಂದು ಹತ್ತು ದಿನಗಳ ನಂತರ ಮಣಿಪುರ ಮುಖ್ಯಮಂತ್ರಿ ಆಯ್ಕೆ ಹೊರಬಿದ್ದಿದೆ. ಮಣಿಪುರ ಬಿಜೆಪಿ ನಾಯಕರುಗಳಾದ ಎನ್ ಬೀರೆನ್ ಸಿಂಗ್, ಬಿಸ್ವಜಿತ್‌ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನೆಡೆದಿತ್ತು. ಈ ಮೂವರು ನಾಯಕರು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರನ್ನು ಬೇಟಿ ಮಾಡಿ ಚರ್ಚಸಿದ ನಂತರ ಎನ್. ಬೀರೆನ್‌ ಸಿಂಗ್‌ ಅವರನ್ನು ಎರಡನೇ ಬಾರಿ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇಂದು ಮಣಿಪುರಕ್ಕೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಕಿರಣ್‌ ರಿಜಿಜು ಅವರು ಮುಖ್ಯಮಂತ್ರಿ ಘೋಷಣೆ ಮಾಡಲು ರಾಜ್ಯದ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ.

ಇದನ್ನೂ ಓದಿ: MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

ಮಣಿಪುರದಲ್ಲಿ ಮಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಪ್ರಚಾರವನ್ನು ಮಾಡಿತ್ತು. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ ಬೀರೆನ್ ಸಿಂಗ್ (61) ಮಣಿಪುರದಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದರು. ಪಕ್ಷದ ಇನ್ನೊಬ್ಬ ನಾಯಕರಾದ ಬಿಸ್ವಜಿತ್‌ ಸಿಂಗ್‌ ಕೂಡ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು ಮತ್ತು ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು. ಆದರೆ 2017 ರ ಚುನಾವಣೆಯ ನಂತರ ಬೀರೆನ್‌‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನ ಸಭೆಯ 60 ಕ್ಷೇತ್ರಗಳಲ್ಲಿ 32 ಸ್ಥಾನಗಳನ್ನು ಸರಳ ಬಹುಮತದ ಮೂಲಕ ರಾಜ್ಯವನ್ನು ಗೆದ್ದ ಬಿಜೆಪಿ, ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ನೀರಿಕ್ಷಿಸಿ ಮುಖ್ಯಮಂತ್ರಿಯ ಆಯ್ಕೆಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಈ ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಸಹ ಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಬಿಜೆಪಿಯ ಕೇಂದ್ರ ನಾಯಕತ್ವ ನಿನ್ನೆ ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು.

ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಭಾರತೀಯ ಸೈನ್ಯಕ್ಕೆ ಮಣಿಪುರ ನಾಗರಿಕರ ಮೇಲೆ ವ್ಯಾಪಕ ಅಧಿಕಾರವನ್ನು ನೀಡುವ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA)ಯನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಮಣಿಪುರ ಚುನಾವಣೆಯಲ್ಲಿ ಬಿರೇನ್ ಸಿಂಗ್ ಹೇಳಿದ್ದರು. ಅವರು ರಾಜ್ಯದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಸಮತೋಲನ ವಿಧಾನವನ್ನು ಆಯ್ಕೆ ಮಾಡುವ ಭರವಸೆ ನೀಡಿದ್ದರು.

ಬಿರೇನ್ ಸಿಂಗ್ ಅವರು ತಮ್ಮ ವೃತ್ತಿಜೀವನವನ್ನು ಫುಟ್ಬಾಲ್ ಆಟಗಾರರಾಗಿ ಪ್ರಾರಂಭಿಸಿ ನಂತರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ನೇಮಕಗೊಂಡು ಅವಧಿ ಮುಗಿದ ನಂತರ ಬಿಎಸ್‌ಎಫ್ ತೊರೆದು ಪತ್ರಕರ್ತರಾದರು. ಯಾವುದೇ ರೀತಿಯ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿ 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

2002 ರಲ್ಲಿ ರಾಜಕೀಯಕ್ಕೆ ಸೇರಿ ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಹಾಗೆಯೇ 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿ, 2017 ರಲ್ಲಿ ಮತ್ತೆ ತಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...