Homeಮುಖಪುಟಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

ಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

- Advertisement -
- Advertisement -

ಚುನಾವಣಾ ಫಲಿತಾಂಶ ಬಂದು ಹತ್ತು ದಿನಗಳ ನಂತರ ಮಣಿಪುರ ಮುಖ್ಯಮಂತ್ರಿ ಆಯ್ಕೆ ಹೊರಬಿದ್ದಿದೆ. ಮಣಿಪುರ ಬಿಜೆಪಿ ನಾಯಕರುಗಳಾದ ಎನ್ ಬೀರೆನ್ ಸಿಂಗ್, ಬಿಸ್ವಜಿತ್‌ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನೆಡೆದಿತ್ತು. ಈ ಮೂವರು ನಾಯಕರು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರನ್ನು ಬೇಟಿ ಮಾಡಿ ಚರ್ಚಸಿದ ನಂತರ ಎನ್. ಬೀರೆನ್‌ ಸಿಂಗ್‌ ಅವರನ್ನು ಎರಡನೇ ಬಾರಿ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇಂದು ಮಣಿಪುರಕ್ಕೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಕಿರಣ್‌ ರಿಜಿಜು ಅವರು ಮುಖ್ಯಮಂತ್ರಿ ಘೋಷಣೆ ಮಾಡಲು ರಾಜ್ಯದ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ.

ಇದನ್ನೂ ಓದಿ: MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

ಮಣಿಪುರದಲ್ಲಿ ಮಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಪ್ರಚಾರವನ್ನು ಮಾಡಿತ್ತು. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ ಬೀರೆನ್ ಸಿಂಗ್ (61) ಮಣಿಪುರದಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದರು. ಪಕ್ಷದ ಇನ್ನೊಬ್ಬ ನಾಯಕರಾದ ಬಿಸ್ವಜಿತ್‌ ಸಿಂಗ್‌ ಕೂಡ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು ಮತ್ತು ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು. ಆದರೆ 2017 ರ ಚುನಾವಣೆಯ ನಂತರ ಬೀರೆನ್‌‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನ ಸಭೆಯ 60 ಕ್ಷೇತ್ರಗಳಲ್ಲಿ 32 ಸ್ಥಾನಗಳನ್ನು ಸರಳ ಬಹುಮತದ ಮೂಲಕ ರಾಜ್ಯವನ್ನು ಗೆದ್ದ ಬಿಜೆಪಿ, ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ನೀರಿಕ್ಷಿಸಿ ಮುಖ್ಯಮಂತ್ರಿಯ ಆಯ್ಕೆಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಈ ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಸಹ ಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಬಿಜೆಪಿಯ ಕೇಂದ್ರ ನಾಯಕತ್ವ ನಿನ್ನೆ ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು.

ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಭಾರತೀಯ ಸೈನ್ಯಕ್ಕೆ ಮಣಿಪುರ ನಾಗರಿಕರ ಮೇಲೆ ವ್ಯಾಪಕ ಅಧಿಕಾರವನ್ನು ನೀಡುವ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA)ಯನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಮಣಿಪುರ ಚುನಾವಣೆಯಲ್ಲಿ ಬಿರೇನ್ ಸಿಂಗ್ ಹೇಳಿದ್ದರು. ಅವರು ರಾಜ್ಯದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಸಮತೋಲನ ವಿಧಾನವನ್ನು ಆಯ್ಕೆ ಮಾಡುವ ಭರವಸೆ ನೀಡಿದ್ದರು.

ಬಿರೇನ್ ಸಿಂಗ್ ಅವರು ತಮ್ಮ ವೃತ್ತಿಜೀವನವನ್ನು ಫುಟ್ಬಾಲ್ ಆಟಗಾರರಾಗಿ ಪ್ರಾರಂಭಿಸಿ ನಂತರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ನೇಮಕಗೊಂಡು ಅವಧಿ ಮುಗಿದ ನಂತರ ಬಿಎಸ್‌ಎಫ್ ತೊರೆದು ಪತ್ರಕರ್ತರಾದರು. ಯಾವುದೇ ರೀತಿಯ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿ 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

2002 ರಲ್ಲಿ ರಾಜಕೀಯಕ್ಕೆ ಸೇರಿ ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಹಾಗೆಯೇ 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿ, 2017 ರಲ್ಲಿ ಮತ್ತೆ ತಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...