Homeಮುಖಪುಟಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

ಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

- Advertisement -
- Advertisement -

ಚುನಾವಣಾ ಫಲಿತಾಂಶ ಬಂದು ಹತ್ತು ದಿನಗಳ ನಂತರ ಮಣಿಪುರ ಮುಖ್ಯಮಂತ್ರಿ ಆಯ್ಕೆ ಹೊರಬಿದ್ದಿದೆ. ಮಣಿಪುರ ಬಿಜೆಪಿ ನಾಯಕರುಗಳಾದ ಎನ್ ಬೀರೆನ್ ಸಿಂಗ್, ಬಿಸ್ವಜಿತ್‌ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನೆಡೆದಿತ್ತು. ಈ ಮೂವರು ನಾಯಕರು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರನ್ನು ಬೇಟಿ ಮಾಡಿ ಚರ್ಚಸಿದ ನಂತರ ಎನ್. ಬೀರೆನ್‌ ಸಿಂಗ್‌ ಅವರನ್ನು ಎರಡನೇ ಬಾರಿ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇಂದು ಮಣಿಪುರಕ್ಕೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಕಿರಣ್‌ ರಿಜಿಜು ಅವರು ಮುಖ್ಯಮಂತ್ರಿ ಘೋಷಣೆ ಮಾಡಲು ರಾಜ್ಯದ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ.

ಇದನ್ನೂ ಓದಿ: MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

ಮಣಿಪುರದಲ್ಲಿ ಮಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಪ್ರಚಾರವನ್ನು ಮಾಡಿತ್ತು. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ ಬೀರೆನ್ ಸಿಂಗ್ (61) ಮಣಿಪುರದಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದರು. ಪಕ್ಷದ ಇನ್ನೊಬ್ಬ ನಾಯಕರಾದ ಬಿಸ್ವಜಿತ್‌ ಸಿಂಗ್‌ ಕೂಡ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು ಮತ್ತು ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು. ಆದರೆ 2017 ರ ಚುನಾವಣೆಯ ನಂತರ ಬೀರೆನ್‌‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನ ಸಭೆಯ 60 ಕ್ಷೇತ್ರಗಳಲ್ಲಿ 32 ಸ್ಥಾನಗಳನ್ನು ಸರಳ ಬಹುಮತದ ಮೂಲಕ ರಾಜ್ಯವನ್ನು ಗೆದ್ದ ಬಿಜೆಪಿ, ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ನೀರಿಕ್ಷಿಸಿ ಮುಖ್ಯಮಂತ್ರಿಯ ಆಯ್ಕೆಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಈ ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಸಹ ಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಬಿಜೆಪಿಯ ಕೇಂದ್ರ ನಾಯಕತ್ವ ನಿನ್ನೆ ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು.

ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಭಾರತೀಯ ಸೈನ್ಯಕ್ಕೆ ಮಣಿಪುರ ನಾಗರಿಕರ ಮೇಲೆ ವ್ಯಾಪಕ ಅಧಿಕಾರವನ್ನು ನೀಡುವ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA)ಯನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಮಣಿಪುರ ಚುನಾವಣೆಯಲ್ಲಿ ಬಿರೇನ್ ಸಿಂಗ್ ಹೇಳಿದ್ದರು. ಅವರು ರಾಜ್ಯದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಸಮತೋಲನ ವಿಧಾನವನ್ನು ಆಯ್ಕೆ ಮಾಡುವ ಭರವಸೆ ನೀಡಿದ್ದರು.

ಬಿರೇನ್ ಸಿಂಗ್ ಅವರು ತಮ್ಮ ವೃತ್ತಿಜೀವನವನ್ನು ಫುಟ್ಬಾಲ್ ಆಟಗಾರರಾಗಿ ಪ್ರಾರಂಭಿಸಿ ನಂತರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ನೇಮಕಗೊಂಡು ಅವಧಿ ಮುಗಿದ ನಂತರ ಬಿಎಸ್‌ಎಫ್ ತೊರೆದು ಪತ್ರಕರ್ತರಾದರು. ಯಾವುದೇ ರೀತಿಯ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿ 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

2002 ರಲ್ಲಿ ರಾಜಕೀಯಕ್ಕೆ ಸೇರಿ ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಹಾಗೆಯೇ 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿ, 2017 ರಲ್ಲಿ ಮತ್ತೆ ತಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...