Homeಮುಖಪುಟಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

ಮಣಿಪುರ: ಬೀರೆನ್‌ ಸಿಂಗ್‌‌ರನ್ನು 2ನೇ ಬಾರಿಗೆ ಸಿಎಂ ಆಗಿ ಆಯ್ಕೆ ಮಾಡಿದ BJP

- Advertisement -
- Advertisement -

ಚುನಾವಣಾ ಫಲಿತಾಂಶ ಬಂದು ಹತ್ತು ದಿನಗಳ ನಂತರ ಮಣಿಪುರ ಮುಖ್ಯಮಂತ್ರಿ ಆಯ್ಕೆ ಹೊರಬಿದ್ದಿದೆ. ಮಣಿಪುರ ಬಿಜೆಪಿ ನಾಯಕರುಗಳಾದ ಎನ್ ಬೀರೆನ್ ಸಿಂಗ್, ಬಿಸ್ವಜಿತ್‌ ಸಿಂಗ್ ಮತ್ತು ಯುಮ್ನಮ್ ಖೇಮ್ಚಂದ್ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನೆಡೆದಿತ್ತು. ಈ ಮೂವರು ನಾಯಕರು ನಿನ್ನೆ ದೆಹಲಿಯಲ್ಲಿ ಬಿಜೆಪಿ ಕೇಂದ್ರ ನಾಯಕರನ್ನು ಬೇಟಿ ಮಾಡಿ ಚರ್ಚಸಿದ ನಂತರ ಎನ್. ಬೀರೆನ್‌ ಸಿಂಗ್‌ ಅವರನ್ನು ಎರಡನೇ ಬಾರಿ ಸಿಎಂ ಆಗಿ ಆಯ್ಕೆ ಮಾಡಲಾಗಿದೆ.

ಇಂದು ಮಣಿಪುರಕ್ಕೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಒಕ್ಕೂಟ ಸರ್ಕಾರದ ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಕಿರಣ್‌ ರಿಜಿಜು ಅವರು ಮುಖ್ಯಮಂತ್ರಿ ಘೋಷಣೆ ಮಾಡಲು ರಾಜ್ಯದ ರಾಜಧಾನಿ ಇಂಫಾಲ್‌ಗೆ ಆಗಮಿಸಿದ್ದಾರೆ.

ಇದನ್ನೂ ಓದಿ: MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

ಮಣಿಪುರದಲ್ಲಿ ಮಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಬಿಜೆಪಿ ಪ್ರಚಾರವನ್ನು ಮಾಡಿತ್ತು. ಮಾಜಿ ಫುಟ್ಬಾಲ್ ಆಟಗಾರ ಮತ್ತು ಪತ್ರಕರ್ತ ಬೀರೆನ್ ಸಿಂಗ್ (61) ಮಣಿಪುರದಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದರು. ಪಕ್ಷದ ಇನ್ನೊಬ್ಬ ನಾಯಕರಾದ ಬಿಸ್ವಜಿತ್‌ ಸಿಂಗ್‌ ಕೂಡ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದರು ಮತ್ತು ಬಿರೇನ್ ಸಿಂಗ್ ಅವರಿಗಿಂತ ಹೆಚ್ಚು ಕಾಲ ಬಿಜೆಪಿಯಲ್ಲಿ ಕೆಲಸ ಮಾಡಿದ್ದರು. ಆದರೆ 2017 ರ ಚುನಾವಣೆಯ ನಂತರ ಬೀರೆನ್‌‌ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು.

ವಿಧಾನ ಸಭೆಯ 60 ಕ್ಷೇತ್ರಗಳಲ್ಲಿ 32 ಸ್ಥಾನಗಳನ್ನು ಸರಳ ಬಹುಮತದ ಮೂಲಕ ರಾಜ್ಯವನ್ನು ಗೆದ್ದ ಬಿಜೆಪಿ, ವಿರೋಧ ಪಕ್ಷಗಳು ಪರಿಸ್ಥಿತಿಯನ್ನು ಬಳಸಿಕೊಳ್ಳಬಹುದೆಂದು ನೀರಿಕ್ಷಿಸಿ ಮುಖ್ಯಮಂತ್ರಿಯ ಆಯ್ಕೆಯನ್ನು ಬಹಳ ಚಾಣಾಕ್ಷತನದಿಂದ ನಿಭಾಯಿಸಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್ ಬೆಂಬಲಿತ ನಾಯಕ, ಈ ಹಿಂದಿನ ಅಸೆಂಬ್ಲಿಯಲ್ಲಿ ಸ್ಪೀಕರ್ ಆಗಿದ್ದ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಸಹ ಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಬಿಜೆಪಿಯ ಕೇಂದ್ರ ನಾಯಕತ್ವ ನಿನ್ನೆ ಅವರನ್ನು ದೆಹಲಿಗೆ ಕರೆಸಿಕೊಂಡಿತ್ತು.

ಇದನ್ನೂ ಓದಿ: ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಭಾರತೀಯ ಸೈನ್ಯಕ್ಕೆ ಮಣಿಪುರ ನಾಗರಿಕರ ಮೇಲೆ ವ್ಯಾಪಕ ಅಧಿಕಾರವನ್ನು ನೀಡುವ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ (AFSPA)ಯನ್ನು ತೆಗೆದುಹಾಕಲು ಕೆಲಸ ಮಾಡುವುದಾಗಿ ಮಣಿಪುರ ಚುನಾವಣೆಯಲ್ಲಿ ಬಿರೇನ್ ಸಿಂಗ್ ಹೇಳಿದ್ದರು. ಅವರು ರಾಜ್ಯದ ವಾಸ್ತವತೆಯನ್ನು ಅರ್ಥ ಮಾಡಿಕೊಂಡು ಸಮತೋಲನ ವಿಧಾನವನ್ನು ಆಯ್ಕೆ ಮಾಡುವ ಭರವಸೆ ನೀಡಿದ್ದರು.

ಬಿರೇನ್ ಸಿಂಗ್ ಅವರು ತಮ್ಮ ವೃತ್ತಿಜೀವನವನ್ನು ಫುಟ್ಬಾಲ್ ಆಟಗಾರರಾಗಿ ಪ್ರಾರಂಭಿಸಿ ನಂತರ ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ನಲ್ಲಿ ನೇಮಕಗೊಂಡು ಅವಧಿ ಮುಗಿದ ನಂತರ ಬಿಎಸ್‌ಎಫ್ ತೊರೆದು ಪತ್ರಕರ್ತರಾದರು. ಯಾವುದೇ ರೀತಿಯ ತರಬೇತಿ ಮತ್ತು ಅನುಭವವಿಲ್ಲದಿದ್ದರೂ, ಅವರು 1992 ರಲ್ಲಿ ನಹರೋಲ್ಗಿ ತೌಡಂಗ್ ಎಂಬ ಸ್ಥಳೀಯ ದಿನಪತ್ರಿಕೆಯನ್ನು ಪ್ರಾರಂಭಿಸಿ 2001 ರವರೆಗೆ ಅದರ ಸಂಪಾದಕರಾಗಿ ಕೆಲಸ ಮಾಡಿದರು.

2002 ರಲ್ಲಿ ರಾಜಕೀಯಕ್ಕೆ ಸೇರಿ ಮಣಿಪುರದ ಹೀಂಗಾಂಗ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. ಹಾಗೆಯೇ 2007 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ 2012 ರವರೆಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು ಬಿಜೆಪಿ ಸೇರಿ, 2017 ರಲ್ಲಿ ಮತ್ತೆ ತಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು.

ಇದನ್ನೂ ಓದಿ: ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...