Homeಮುಖಪುಟಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

- Advertisement -
- Advertisement -

ಮೇ 4 ರಂದು ಮಣಿಪುರದಲ್ಲಿ ನಡೆದಿರುವ ಇಬ್ಬರು ಕುಕಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಘಟನೆಯ ವಿಡಿಯೋಗಳು ದೇಶವನ್ನೇ ತಲ್ಲಣಗೊಳಿಸಿವೆ. ಆ ಹೀನ ಘಟನೆಯ ನಂತರವೂ ಇಂಫಾಲ ಜಿಲ್ಲೆಯಲ್ಲಿ ಮತ್ತಿಬ್ಬರು ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈಯಲಾಗಿದೆ ಎಂದು ಪೊಲೀಸ್ ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆದರೆ ಈ ಸಂಬಂಧ ಯಾವುದೇ ಆರೋಪಿಗಳನ್ನು ಇದುವರೆಗೂ ಬಂಧಿಸಲಾಗಿಲ್ಲ. ಎಲ್ಲೆ ಇಲ್ಲದೆ ನಡೆದ ಈ ಮಣಿಪುರದ ಕ್ರೌರ್ಯದ ವಿವರಗಳು ಗೊತ್ತಿದ್ದರೂ ಮಣಿಪುರ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲೀ ಕ್ರಮ ತೆಗೆದುಕೊಳ್ಳದೇ ಇರುವುದು ದೊಡ್ಡ ದುರಂತವಾಗಿದೆ.

ಈ ಅಮಾನುಷ ಘಟನೆಗಳು ಒಂದು ಗಂಟೆಯ ಅಂತರದಲ್ಲಿ ನಡೆದಿದ್ದು ಸಂತ್ರಸ್ತರು ಕುಕಿ ಸಮುದಾಯದವರಾಗಿದ್ದರೆ, ಆರೋಪಿಗಳು ಮೈತೇಯಿ ಸಮುದಾಯಕ್ಕೆ ಸೇರಿದವರು ಎಂದು ಎಫ್‌ಐಆರ್ ಉಲ್ಲೇಖಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬೆತ್ತಲೆ ಪ್ರಕರಣದ 30 ಸೆಕೆಂಡ್‌ಗಳ ಅಮಾನವೀಯ ವಿಡಿಯೋ ವೈರಲ್ ಆಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಮೇಲೆ 77 ದಿನಗಳ ನಂತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಇಂಫಾಲ ಜಿಲ್ಲೆಯ ಅತ್ಯಾಚಾರ, ಕೊಲೆಯ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ ಎನ್ನಲಾಗಿದೆ.

ಇಂಫಾಲ್‌ನಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಇಬ್ಬರು ಮಹಿಳೆಯರು 21 ಮತ್ತು 24 ವರ್ಷ ವಯಸ್ಸಿನ ಸಹೋದರಿಯರಾಗಿದ್ದು, ನಗರದ ಕಾರ್‌ವಾಶ್‌ನಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂದರ್ಭದಲ್ಲಿ ಅವರ ಮನೆಗೆ ನುಗ್ಗಿ ಕೊಲ್ಲುವ ಮೊದಲು ಅತ್ಯಾಚಾರ ನಡೆಸಿತು ಅವರ ತಂದೆ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ಕುಕಿ ಸಮುದಾಯದವರು. ನನ್ನ ಹಿರಿಯ ಮಗಳ ಸ್ನೇಹಿತೆ ಮೈತೇಯಿ ಸಮುದಾಯಕ್ಕೆ ಸೇರಿದ್ದು, ಆಕೆ ಪುರುಷರು ಮತ್ತು ಮಹಿಳೆಯರ ಗುಂಪೊಂದು ಅವರ ಮನೆಗೆ ನುಗ್ಗಿ ಅವರನ್ನು ಹತ್ಯೆ ಮಾಡಿದೆ ಎಂದು ನಮಗೆ ತಿಳಿಸಿಳು. ನಾನು ಪೊಲೀಸ್ ಅಧಿಕಾರಿಯೊಂದಿಗೆ ಶವಾಗಾರಕ್ಕೆ ಹೋದೆ. ಅಲ್ಲಿ ನನ್ನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ದೂರು ದಾಖಲಿಸಿದ್ದೇನೆ. ಪೊಲೀಸರು ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನನಗೆ ಮಾಹಿತಿ ನೀಡಿಲ್ಲ. ತನಿಖೆಗಾಗಿ ದೇಹಗಳನ್ನು ಸಂರಕ್ಷಿಸಲಾಗಿದೆ ಎಂದು ಅವರು ಹೇಳಿದರು” ಎಂದು ಸಂತ್ರಸ್ತರ ತಂದೆ ಮಾಧ್ಯಮಗಳಿಗೆ ಹೇಳಿದ್ದಾರೆ.

ಅಪರಾಧವು ಮೇ 4 ರಂದು ಇಂಫಾಲ್‌ನ ಮೈತೇಯಿ ಪ್ರಾಬಲ್ಯದ ಕೊನುಂಗ್ ಮನಂಗ್ ಪ್ರದೇಶದಲ್ಲಿ ಅವರ ಮನೆಯಲ್ಲಿ ನಡೆದಿದೆ. ಸುಮಾರು 100-200 ಜನಸಮೂಹವು ಮೈತೇಯಿ ಯುವ ಸಂಘಟನೆಗಳಾದ ಮೀಟೆ ಲೀಪುನ್, ಕಂಗ್ಲೇಪಕ್ ಕನ್ಬಾ ಲುಪ್ (ಕೆಕೆಎಲ್), ಅರಾಂಬೈ ತೆಂಗೋಲ್ ಮತ್ತು ವರ್ಲ್ಡ್ ಮೈಟೈ ಕೌನ್ಸಿಲ್‌ನ ಸದಸ್ಯರೆಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...