Homeಮುಖಪುಟಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ...

ಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ ಮುಖ್ಯಸ್ಥ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಹೇಳಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ಹಾಕಿಪ್ ನೆರೆಹೊರೆಯವರಾಗಿದ್ದರೂ, ಬಿರೇನ್ ಸಿಂಗ್ ಏನೂ ಮಾಡಲಿಲ್ಲ. ಅಂತಿಮವಾಗಿ ಮನೆ ಸುಟ್ಟುಹೋಯಿತು. ಬಿರೇನ್ ಸಿಂಗ್ ಉದ್ದೇಶಪೂರ್ವಕವಾಗಿ ಕುಕಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹ್ಯಾಂಗ್‌ಶಿಂಗ್ ಆಪಾದಿಸಿದ್ದಾರೆ. “ಅದಕ್ಕಾಗಿಯೇ ಈಗ ಪ್ರತ್ಯೇಕತೆ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಅಗತ್ಯವಿದ್ದರೆ, ಕುಕಿಗಳು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಡುತ್ತಾರೆ ಎಂದು ಹ್ಯಾಂಗ್‌ಶಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂದು ಕೇಳಿದಾಗ ಹ್ಯಾಂಗ್‌ಶಿಂಗ್‌ ಆ ಮಾತನ್ನು ನಿರಾಕರಿಸಿಲ್ಲ. “ಬದಲಿಗೆ, ಇದು ಆತ್ಮರಕ್ಷಣೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕುಕಿ-ಮೈಥೇಯಿ ಘರ್ಷಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕ್ರಿಯೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...