Homeಮುಖಪುಟಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ...

ಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ ಮುಖ್ಯಸ್ಥ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಹೇಳಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ಹಾಕಿಪ್ ನೆರೆಹೊರೆಯವರಾಗಿದ್ದರೂ, ಬಿರೇನ್ ಸಿಂಗ್ ಏನೂ ಮಾಡಲಿಲ್ಲ. ಅಂತಿಮವಾಗಿ ಮನೆ ಸುಟ್ಟುಹೋಯಿತು. ಬಿರೇನ್ ಸಿಂಗ್ ಉದ್ದೇಶಪೂರ್ವಕವಾಗಿ ಕುಕಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹ್ಯಾಂಗ್‌ಶಿಂಗ್ ಆಪಾದಿಸಿದ್ದಾರೆ. “ಅದಕ್ಕಾಗಿಯೇ ಈಗ ಪ್ರತ್ಯೇಕತೆ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಅಗತ್ಯವಿದ್ದರೆ, ಕುಕಿಗಳು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಡುತ್ತಾರೆ ಎಂದು ಹ್ಯಾಂಗ್‌ಶಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂದು ಕೇಳಿದಾಗ ಹ್ಯಾಂಗ್‌ಶಿಂಗ್‌ ಆ ಮಾತನ್ನು ನಿರಾಕರಿಸಿಲ್ಲ. “ಬದಲಿಗೆ, ಇದು ಆತ್ಮರಕ್ಷಣೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕುಕಿ-ಮೈಥೇಯಿ ಘರ್ಷಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕ್ರಿಯೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...