Homeಮುಖಪುಟಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ...

ಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ ಮುಖ್ಯಸ್ಥ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಹೇಳಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ಹಾಕಿಪ್ ನೆರೆಹೊರೆಯವರಾಗಿದ್ದರೂ, ಬಿರೇನ್ ಸಿಂಗ್ ಏನೂ ಮಾಡಲಿಲ್ಲ. ಅಂತಿಮವಾಗಿ ಮನೆ ಸುಟ್ಟುಹೋಯಿತು. ಬಿರೇನ್ ಸಿಂಗ್ ಉದ್ದೇಶಪೂರ್ವಕವಾಗಿ ಕುಕಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹ್ಯಾಂಗ್‌ಶಿಂಗ್ ಆಪಾದಿಸಿದ್ದಾರೆ. “ಅದಕ್ಕಾಗಿಯೇ ಈಗ ಪ್ರತ್ಯೇಕತೆ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಅಗತ್ಯವಿದ್ದರೆ, ಕುಕಿಗಳು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಡುತ್ತಾರೆ ಎಂದು ಹ್ಯಾಂಗ್‌ಶಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂದು ಕೇಳಿದಾಗ ಹ್ಯಾಂಗ್‌ಶಿಂಗ್‌ ಆ ಮಾತನ್ನು ನಿರಾಕರಿಸಿಲ್ಲ. “ಬದಲಿಗೆ, ಇದು ಆತ್ಮರಕ್ಷಣೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕುಕಿ-ಮೈಥೇಯಿ ಘರ್ಷಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕ್ರಿಯೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...