Homeಮುಖಪುಟಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ...

ಮಣಿಪುರ ಸಿಎಂ ಕುಕಿ ಸಮುದಾಯದ ವಿರೋಧಿ, ನಮಗೆ ಪ್ರತ್ಯೇಕ ರಾಜ್ಯ ಬೇಕು: ಬಿಜೆಪಿ ಪರ ಕುಕಿ ಮುಖ್ಯಸ್ಥ

- Advertisement -
- Advertisement -

ಮಣಿಪುರ ಮುಖ್ಯಮಂತ್ರಿ ಕುಕಿ ಸಮುದಾಯದ ವಿರೋಧಿಯಾಗಿದ್ದು, ನಮಗೆ ಪ್ರತ್ಯೇಕ ರಾಜ್ಯ ಬೇಕು ಮತ್ತು ಅದಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ಪರ ಕುಕಿ ಗುಂಪಿನ ಮುಖ್ಯಸ್ಥ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಹೇಳಿದ್ದಾರೆ.

‘ದಿ ವೈರ್‌’ ಜಾಲತಾಣದ ಖ್ಯಾತ ಪತ್ರಕರ್ತ ಕರಣ್ ಥಾಪರ್‌ ನಡೆಸಿರುವ ಸಂದರ್ಶನದಲ್ಲಿ ಕುಕಿ ಪೀಪಲ್ಸ್ ಅಲೈಯನ್ಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾಂಗ್‌ಶಿಂಗ್ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕುಕಿ ಜನರಿಗೆ ಪ್ರತ್ಯೇಕ ಆಡಳಿತ ಬೇಕು. ಇದೇ ರಾಜ್ಯದಲ್ಲಿ ಮೈಥೇಯಿ ಸಮುದಾಯದೊಂದಿಗೆ ಮುಂದೆಯೂ ಇರುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಕುಕಿ ಪೀಪಲ್ಸ್ ಅಲಯನ್ಸ್ ಬೆಂಬಲಿಸಿದೆ ಎಂಬುದನ್ನು ಗಮನಿಸಬಹುದು. ಈ ಬಣದ ಪ್ರಭಾವಿ ನಾಯಕ ವಿಲ್ಸನ್ ಲಾಲಂ ಹ್ಯಾಂಗ್‌ಶಿಂಗ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, “ನಮಗೆ ಪ್ರತ್ಯೇಕ ಆಡಳಿತ ಬೇಕೆಂಬ ಬೇಡಿಕೆಯಿಂದ ಕುಕಿ ಸಮುದಾಯ ಹಿಂದೆ ಸರಿಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕ ಆಡಳಿತವೆಂದರೆ ಪ್ರತ್ಯೇಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಆಗಿರಬಹುದು ಎಂದು ಅವರು ಹೇಳಿದ್ದಾರೆ. ಮಣಿಪುರದೊಳಗೆ ಸ್ವಾಯತ್ತ ಪ್ರಾದೇಶಿಕ ಮಂಡಳಿಗಳ ಆಯ್ಕೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲಾಗಿದೆ ಎಂದು ಅವರು ವಿಷಾದಿಸಿದ್ದಾರೆ.

“ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮೇಲಿನ ನಂಬಿಕೆಯನ್ನು ಕುಕಿ ಪೀಪಲ್ಸ್ ಅಲೈಯನ್ಸ್ ಕಳೆದುಕೊಂಡಿದೆ” ಎಂದಿರುವ ಅವರು, ತಾಂತ್ರಿಕವಾಗಿ ಬೆಂಬಲವನ್ನು ಹಿಂತೆಗೆದುಕೊಳ್ಳದಿದ್ದರೂ, ಮುಂದಿನ ದಿನಗಳಲ್ಲಿ ಬೆಂಬಲ ವಾಪಸ್ ಪಡೆಯುವ ಸೂಚನೆಯನ್ನೂ ಅವರು ನೀಡಿದ್ದಾರೆ.

ಬಿರೇನ್ ಸಿಂಗ್ ಅವರು ತಮ್ಮದೇ ಆದ ಬಹುಮತವನ್ನು ಹೊಂದಿರುವುದರಿಂದ, ಕುಕಿ ಪೀಪಲ್ಸ್ ಅಲೈಯನ್ಸ್‌ನ ಬೆಂಬಲವು ತಾಂತ್ರಿಕವಾಗಿ ಅತ್ಯುತ್ತಮವಾಗಿದೆ ಎಂದು ಅವರು ವಿವರಿಸಿದ್ದಾರೆ. ಬಿರೇನ್ ಸಿಂಗ್ ‘ಕುಕಿ ವಿರೋಧಿ’ ಎಂದು ಹ್ಯಾಂಗ್‌ಶಿಂಗ್ ಕಿಡಿಕಾರಿದ್ದಾರೆ.

ಕುಕಿ ಮತ್ತು ಮೈಥೇಯಿ ಸಮುದಾಯದ ನಡುವಿನ ಸಮಸ್ಯೆಗೆ ಬಿರೇನ್‌ ಸಿಂಗ್ ಅವರು ಕಳೆದ ನಾಲ್ಕೈದು ವರ್ಷಗಳಲ್ಲಿ ತೋರಿರುವ ವರ್ತನೆಯೇ ಕಾರಣ ಎಂದು ಹ್ಯಾಂಗ್‌ಶಿಂಗ್ ಆರೋಪಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಅವರು ಬೇಜವಾಬ್ದಾರಿ ತೋರಿದ್ದಾರೆಂದು ಉದಾಹರಣೆಗಳನ್ನು ಅವರು ನೀಡಿದ್ದಾರೆ. “ತಮ್ಮ ಮನೆಯನ್ನು ಲೂಟಿ ಮಾಡಲಾಗುತ್ತಿದೆ, ಸುಟ್ಟು ಹಾಕಲಾಗುತ್ತಿದೆ” ಎಂದು ಹೇಳಲು ಬಿಜೆಪಿ ಶಾಸಕ, ಬಿರೇನ್ ಸಿಂಗ್ ಅವರ ಸರ್ಕಾರದ ಸದಸ್ಯ ಲೆಟ್ಪಾವೊ ಹಾಕಿಪ್ ಅವರು ಬಿರೇನ್ ಸಿಂಗ್ ಅವರಿಗೆ ಪದೇ ಪದೇ ಫೋನ್ ಮಾಡಿದರೂ ಸ್ಪಂದಿಸಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

ಹಾಕಿಪ್ ನೆರೆಹೊರೆಯವರಾಗಿದ್ದರೂ, ಬಿರೇನ್ ಸಿಂಗ್ ಏನೂ ಮಾಡಲಿಲ್ಲ. ಅಂತಿಮವಾಗಿ ಮನೆ ಸುಟ್ಟುಹೋಯಿತು. ಬಿರೇನ್ ಸಿಂಗ್ ಉದ್ದೇಶಪೂರ್ವಕವಾಗಿ ಕುಕಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹ್ಯಾಂಗ್‌ಶಿಂಗ್ ಆಪಾದಿಸಿದ್ದಾರೆ. “ಅದಕ್ಕಾಗಿಯೇ ಈಗ ಪ್ರತ್ಯೇಕತೆ ಅಗತ್ಯವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

ಅಗತ್ಯವಿದ್ದರೆ, ಕುಕಿಗಳು ಪ್ರತ್ಯೇಕ ಆಡಳಿತಕ್ಕಾಗಿ ಹೋರಾಡುತ್ತಾರೆ ಎಂದು ಹ್ಯಾಂಗ್‌ಶಿಂಗ್ ಸ್ಪಷ್ಟಪಡಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆಯೇ ಎಂದು ಕೇಳಿದಾಗ ಹ್ಯಾಂಗ್‌ಶಿಂಗ್‌ ಆ ಮಾತನ್ನು ನಿರಾಕರಿಸಿಲ್ಲ. “ಬದಲಿಗೆ, ಇದು ಆತ್ಮರಕ್ಷಣೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕುಕಿ-ಮೈಥೇಯಿ ಘರ್ಷಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕ್ರಿಯೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...