Homeಮುಖಪುಟಹಿಂಸಾಚಾರ ನಿಯಂತ್ರಿಸಲಾಗದೇ ರಾಜೀನಾಮೆ ನೀಡಲು ಮುಂದಾದ ಮಣಿಪುರ ಸಿಎಂ ಬಿರೇನ್ ಸಿಂಗ್‌

ಹಿಂಸಾಚಾರ ನಿಯಂತ್ರಿಸಲಾಗದೇ ರಾಜೀನಾಮೆ ನೀಡಲು ಮುಂದಾದ ಮಣಿಪುರ ಸಿಎಂ ಬಿರೇನ್ ಸಿಂಗ್‌

- Advertisement -
- Advertisement -

ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಅವರು ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶುಕ್ರವಾರ ಬಿರೇನ್ ಸಿಂಗ್ ಮತ್ತು ರಾಜ್ಯಪಾಲೆ ಅನುಸೂಯಾ ಉಯ್ಕೆ ಭೇಟಿಗೆ ಸಮಯ ನಿಗದಿಯಾಗಿತ್ತು. ಅದರಂತೆ ಇದೀಗ ಭೇಟಿಯಾಗಿದ್ದು, ಈ ಸಂದರ್ಭದಲ್ಲೇ ರಾಜೀನಾಮೆ ಪತ್ರ ಸಲ್ಲಿಕೆ ಮಾಡುತ್ತಾರೆ ಎಂದು ಮೂಲಗಳು ಹೇಳಿವೆ.

ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದ್ದರೂ, ನಿಯಂತ್ರಿಸುವಲ್ಲಿ ಬಿರೇನ್ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಸಿಎಂ ರಾಜೀನಾಮಗೆ ಪ್ರತಿಪಕ್ಷಗಳ ಆಗ್ರಹ

ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಆಡಳಿತದಲ್ಲಿ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಶನಿವಾರದಂದು ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದೆ.

ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರು ಸರ್ವಪಕ್ಷಗಳ ಸರಾಸರಿಯಲ್ಲಿ ಎಂಟು ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಪ್ರಸ್ತುತಪಡಿಸಿದರು, ಇದು ಪ್ರಸ್ತುತ ಸಿಎಂ ಬಿರೇನ್ ಸಿಂಗ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದನ್ನು ಉಲ್ಲೇಖಿಸಿದೆ. ಈ ಸಭೆಯನ್ನು ಗೃಹ ಸಚಿವ ಅಮಿತ್ ಶಾ ಕರೆದಿದ್ದರು.

”ಮಣಿಪುರದ ಸಿಎಂ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದು ನಮ್ಮ ಬೇಡಿಕೆಯಾಗಿದೆ. ರಾಜೀನಾಮೆ ನೀಡದೇ ಮಣಿಪುರದಲ್ಲಿ ಶಾಂತಿ ಮತ್ತು ಸಹಜತೆ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಸಭೆಯ ನಂತರ, ಒಕ್ರಾಮ್ ಇಬೋಬಿ ಸಿಂಗ್ ಅವರು ”ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಹೆಚ್ಚಿನ ಸಮಯವನ್ನು ನೀಡಿರುವುದು “ದುರದೃಷ್ಟಕರ” ಎಂದು ಅಸಮಧಾನ ಹೊರಹಾಕಿದ್ದರು. ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಬೇಕಿತ್ತು. ಕಳೆದ 50 ದಿನಗಳಲ್ಲಿ ಮಣಿಪುರದ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ” ಎಂದು ಪ್ರಧಾನಿ ಮೋದಿಯವರ ಮೇಲೆ ದಾಳಿ ಮಾಡಿದರು.

”ರಾಜ್ಯ ಸರ್ಕಾರವು ಅತ್ಯಂತ ಅಗತ್ಯವಿರುವಾಗ ಪರಿಣಾಮಕಾರಿ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮತ್ತು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಗಳು ತಮ್ಮ ವೈಫಲ್ಯವನ್ನು ಎರಡು ಬಾರಿ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಜನರ ಕ್ಷಮೆಯನ್ನೂ ಕೇಳಿದ್ದಾರೆ. ಕೂಡಲೇ ಮುಖ್ಯಮಂತ್ರಿಯನ್ನು ಬದಲಾಯಿಸಬೇಕು” ಎಂದು ಒಕ್ರಾಮ್ ಇಬೋಬಿ ಸಿಂಗ್ ಆಗ್ರಹಿಸಿದ್ದರು.

ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಜ್ಯದಾದ್ಯಂತ ತೆರೆಯಲಾಗಿರುವ 300 ಪರಿಹಾರ ಕೇಂದ್ರಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಮೈತಿ ಸಮುದಾಯದ ಇಬ್ಬರ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...