Homeಮುಖಪುಟಮಣಿಪುರ ಜನಾಂಗೀಯ ಹಿಂಸಾಚಾರ; ಮೇ ತಿಂಗಳಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

ಮಣಿಪುರ ಜನಾಂಗೀಯ ಹಿಂಸಾಚಾರ; ಮೇ ತಿಂಗಳಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

- Advertisement -
- Advertisement -

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಚಂದೇಲ್ ಜಿಲ್ಲೆಯ ಸೊಕೊಮ್ ಗ್ರಾಮದಿಂದ ಕಳೆದ ವರ್ಷ ಮೇ ತಿಂಗಳಲ್ಲಿ ನಾಪತ್ತೆಯಾಗಿದ್ದ 17 ವರ್ಷದ ಬಾಲಕನ ಕೊಳೆತ ಶವವನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆದ ನಂತರ ಮೂರು ಗಂಟೆಗಳ ಸುದೀರ್ಘ ಹುಡುಕಾಟದ ನಂತರ ಎನ್ಗಾಂಗೊಮ್ ನೆವಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಜನರು ತಿಳಿಸಿದ್ದಾರೆ. ವ್ಯಕ್ತಿಯ ಶಿರಚ್ಛೇದನ ಮಾಡಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

“ದೇಹವನ್ನು ವಶಪಡಿಸಿಕೊಂಡ ಪ್ರದೇಶದಲ್ಲಿ ವೀಡಿಯೊ ಮಾಡಲಾಗಿದ್ದು, ಸ್ನಿಫರ್ ಶ್ವಾನ ಪಡೆ ಬಳಸಿಕೊಂಡು ಹುಡುಕಾಟ ನಡೆಸಲಾಯಿತು… ನಂತರ ದೇಹವನ್ನು ವಶಕ್ಕೆ ಪಡೆಯಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೆವಿ ಅವರ ಕುಟುಂಬದವರು ಆತ ಧರಿಸಿದ್ದ ಬಟ್ಟೆಯ ಆಧಾರದ ಮೇಲೆ ಶವವನ್ನು ಗುರುತಿಸಿದ್ದಾರೆ. ಕಳೆದ ವರ್ಷ ಸುಗ್ನು ಮತ್ತು ಸೆರೋ ಗ್ರಾಮಗಳಲ್ಲಿ ಹಿಂಸಾಚಾರ ನಡೆದಾಗ ನೆವಿ ನಾಪತ್ತೆಯಾಗಿದ್ದರು. ಅವರ ಕುಟುಂಬ ಕಳೆದ ವರ್ಷ ಮೇ 31 ರಂದು ನಾಪತ್ತೆ ದೂರು ದಾಖಲಿಸಿದೆ. ನೆವಿ ಅವರ ಕುಟುಂಬವು ಕಳೆದ ವರ್ಷ ಜುಲೈ 30 ರಂದು ಅವರ ದೇಹದ ಸಾಂಕೇತಿಕ ಪ್ರತಿನಿಧಿಯಾಗಿ ಮರವನ್ನು ಬಳಸಿಕೊಂಡು ಅವರ ಅಂತಿಮ ವಿಧಿಗಳನ್ನು ನೆರವೇರಿಸಿತು.

ಇದಕ್ಕೂ ಮುನ್ನ ಹಲವು ಬಾರಿ ಬಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಅಷ್ಟು ಸಮಯದವರೆಗೆ ಮೃತದೇಹ ಪತ್ತೆಯಾಗಿರಲಿಲ್ಲ. ಆತ ಸತ್ತನೆಂದು ಭಾವಿಸಿದ್ದ ಕುಟುಂಬದ ಸದಸ್ಯರು, ಸಾಂಪ್ರದಾಯಿಕ ಆಚರಣೆ ಭಾಗವಾಗಿ ಮೃತದೇಹದ ಸಾಂಕೇತಿಕ ಪ್ರಾತಿನಿಧ್ಯವಾಗಿ “ಪ್ಯಾಂಗಾಂಗ್” ಮರದ ಗಿಡವನ್ನು ಬಳಸಿಕೊಂಡು ಆತನ ಕೊನೆಯ ವಿಧಿವಿಧಾನ ಸಹ ಮುಗಿಸಿದ್ದರು.

ಆದರೆ, ಮಂಗಳವಾರ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಆ ವೈರಲ್ ವಿಡಿಯೋ ನೋಡಿದ ಕುಟುಂಬ ಸದಸ್ಯರು ಮತ್ತೆ ಸುಗ್ನು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ವರದಿಯ ಮೇರೆಗೆ ಬುಧವಾರ ಬೆಳಗ್ಗೆ 11.10 ರಿಂದ ವಿಧಿವಿಜ್ಞಾನ ತಂಡ, ಕೇಂದ್ರ ಪಡೆಗಳು, ಸಂತ್ರಸ್ತನ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜನರ ಸಮ್ಮುಖದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

ವೈರಲ್ ವೀಡಿಯೊವನ್ನು ಆಧರಿಸಿ, ಎಲ್ಲಾ ಶಂಕಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು ಮತ್ತು ಅಂತಿಮವಾಗಿ ಚಂದೇಲ್ ಜಿಲ್ಲೆಯ ಸೊಕೊಮ್ ಗ್ರಾಮದಲ್ಲಿ ನೆವಿಯ ಕೊಳೆತ ದೇಹವು ಪತ್ತೆಯಾಗಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ-ಜೋ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 200 ಜನರು ಸಾವನ್ನಪ್ಪಿದ್ದಾರೆ. ಸುಮಾರು 50,000 ಜನರು ಸ್ಥಳಾಂತರಗೊಂಡಿದ್ದು, ಹಲವಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ‘ಅಪ್ರಾಮಾಣಿಕತೆ, ಅರಾಜಕತೆಯ ಗೆಲುವು…’; ಚಂಡೀಗಢ ಮೇಯರ್ ಚುನಾವಣೆ ಕುರಿತು ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...