Homeಮುಖಪುಟಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ಯುದ್ಧಭೂಮಿ ಮಣಿಪುರದ ಚದುರಿದ ಚಿತ್ರಗಳು

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ಮೇ 3ರಂದು ಘರ್ಷಣೆಗಳು ಆರಂಭಗೊಂಡ ಬಳಿಕ ಚುರಾಚಂದ್ರಪುರ,ಕಾಂಗ್‌ಪೊಕ್ಪಿ ಮತ್ತು ತೆಂಗನೌಪಾಲ್‌ನಂತಹ ಕುಕಿ ಬಹುಸಂಖ್ಯಾತ ಜಿಲ್ಲೆಗಳಿಂದ ತಳಮಟ್ಟದ ವರದಿಗಾರಿಕೆ ನಡೆದಿರಲಿಲ್ಲ ಎಂದು ಮೂವರು ಸದಸ್ಯರ ಸತ್ಯಶೋಧನಾ ತಂಡವು ಹೇಳಿದೆ. ಮೇ ಮಧ್ಯಭಾಗದಿಂದ ಗುಡ್ಡಗಾಡು ಜಿಲ್ಲೆಗಳಲ್ಲಿಯ ತಮ್ಮ ಪ್ರತಿನಿಧಿಗಳು ಫೋನ್ ಕರೆಗಳಿಗೆ ಉತ್ತರಿಸುವುದನ್ನೂ ನಿಲ್ಲಿಸಿದ್ದರು ಎಂದು ಪತ್ರಕರ್ತರು ತನಗೆ ತಿಳಿಸಿದ್ದರು ಎಂದು ಎಡಿಟರ್ಸ್ ಗಿಲ್ಡ್‌ನೊಂದಿಗೆ ಮಾತನಾಡಿದ ಇಂಫಾಲ್‌ನ ಹಿರಿಯ ಸಾಮಾಜಿಕ ಧುರೀಣರೋರ್ವರು ಹೇಳಿದರು.

ಇಂಫಾಲ್‌ನಲ್ಲಿಯ ಸಂಪಾದಕರು ಪರಸ್ಪರರೊಂದಿಗೆ ಸಮಾಲೋಚನೆಗಳನ್ನು ನಡೆಸಿ ಸಾಮಾನ್ಯ ನಿರೂಪಣೆಯನ್ನು ಒಪ್ಪಿಕೊಳ್ಳುವುದರೊಂದಿಗೆ ಸಾಮೂಹಿಕವಾಗಿ ಕಾರ್ಯ ನಿರ್ವಹಿಸಿದ್ದರು. ಅದಾಗಲೇ ಉದ್ವಿಗ್ನಗೊಂಡಿದ್ದ ಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಲು ಅವರು ಬಯಸಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಆದಾಗ್ಯೂ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಇಂತಹ ಕಾರ್ಯ ವಿಧಾನದ ಲೋಪವೆಂದರೆ ಅದು ಸುಲಭವಾಗಿ ಸಾಮಾನ್ಯ ಜನಾಂಗೀಯ ನಿರೂಪಣೆಯನ್ನು ರೂಪಿಸುತ್ತದೆ ಹಾಗೂ ಯಾವುದನ್ನು ವರದಿ ಮಾಡಬೇಕು ಮತ್ತು ಯಾವುದನ್ನು ತಡೆಹಿಡಿಯಬೇಕು ಎಂದು ನಿರ್ಧರಿಸುವ ಮೂಲಕ ಪತ್ರಿಕೋದ್ಯಮ ತತ್ತ್ವಗಳ ಸಾಮೂಹಿಕ ಕುಸಿತಕ್ಕೆ ಕಾರಣವಾಗುತ್ತದೆ ಎಂದು ತಂಡದ ವರದಿಯು ಹೇಳಿದೆ.

ಮಾಧ್ಯಮಗಳು ನಕಲಿ ಸುದ್ದಿಗಳನ್ನು ವರದಿ ಮಾಡಿದ್ದ ಮತ್ತು ತಪ್ಪುಮಾಹಿತಿಗಳನ್ನು ಹರಡಿದ್ದ 10ಕ್ಕೂ ಹೆಚ್ಚಿನ ನಿದರ್ಶನಗಳನ್ನು ಬೆಟ್ಟು ಮಾಡಿರುವ ಎಡಿಟರ್ಸ್ ಗಿಲ್ಡ್, ಇಂಫಾಲ ಮಾಧ್ಯಮಗಳಲ್ಲಿ ಮಾತ್ರ ಪ್ರಕಟಗೊಳ್ಳುವ ಸುಳ್ಳುಸುದ್ದಿಗಳ ಮೂಲಕ ಜನಾಂಗೀಯ ವಿಭಜನೆಯು ಹಂತಹಂತವಾಗಿ ಆಳಗೊಳ್ಳುತ್ತಿರುವುದು ಈಗ ಗೋಚರಿಸುತ್ತಿದೆ ಎಂದು ಹೇಳಿದೆ.

ಇಂಫಾಲನಲ್ಲಿಯ ಮಾಧ್ಯಮಗಳು ಭದ್ರತಾ ಪಡೆಗಳನ್ನು,ವಿಶೇಷವಾಗಿ ಅಸ್ಸಾಂ ರೈಫಲ್ಸನ್ನು ದೂಷಿಸಿದ್ದವು ಎಂದು ಹೇಳಿರುವ ವರದಿಯು,ರಾಜ್ಯ ಸರಕಾರವು ಸಹ ಅಸ್ಸಾಂ ರೈಫಲ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ಮಣಿಪುರ ಪೋಲಿಸರಿಗೆ ಅವಕಾಶ ನೀಡುವ ಮೂಲಕ ಈ ದೂಷಣೆಯನ್ನು ಮೌನವಾಗಿ ಬೆಂಬಲಿಸಿತ್ತು. ಸರಕಾರದ ಒಂದು ಕೈಗೆ ಇನ್ನೊಂದು ಕೈ ಏನು ಮಾಡುತ್ತಿದೆ ಎನ್ನುವುದು ತಿಳಿದಿರಲಿಲ್ಲ ಅಥವಾ ಇದು ಉದ್ದೇಶಪೂರ್ವಕ ಕ್ರಮವಾಗಿತ್ತು ಎನ್ನುವುದನ್ನು ಇದು ಸೂಚಿಸುತ್ತಿದೆ ಎಂದು ಬೆಟ್ಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...