Homeಮುಖಪುಟಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ಯುದ್ಧಭೂಮಿ ಮಣಿಪುರದ ಚದುರಿದ ಚಿತ್ರಗಳು

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ಮೇ 3ರಂದು ಘರ್ಷಣೆಗಳು ಆರಂಭಗೊಂಡ ಬಳಿಕ ಚುರಾಚಂದ್ರಪುರ,ಕಾಂಗ್‌ಪೊಕ್ಪಿ ಮತ್ತು ತೆಂಗನೌಪಾಲ್‌ನಂತಹ ಕುಕಿ ಬಹುಸಂಖ್ಯಾತ ಜಿಲ್ಲೆಗಳಿಂದ ತಳಮಟ್ಟದ ವರದಿಗಾರಿಕೆ ನಡೆದಿರಲಿಲ್ಲ ಎಂದು ಮೂವರು ಸದಸ್ಯರ ಸತ್ಯಶೋಧನಾ ತಂಡವು ಹೇಳಿದೆ. ಮೇ ಮಧ್ಯಭಾಗದಿಂದ ಗುಡ್ಡಗಾಡು ಜಿಲ್ಲೆಗಳಲ್ಲಿಯ ತಮ್ಮ ಪ್ರತಿನಿಧಿಗಳು ಫೋನ್ ಕರೆಗಳಿಗೆ ಉತ್ತರಿಸುವುದನ್ನೂ ನಿಲ್ಲಿಸಿದ್ದರು ಎಂದು ಪತ್ರಕರ್ತರು ತನಗೆ ತಿಳಿಸಿದ್ದರು ಎಂದು ಎಡಿಟರ್ಸ್ ಗಿಲ್ಡ್‌ನೊಂದಿಗೆ ಮಾತನಾಡಿದ ಇಂಫಾಲ್‌ನ ಹಿರಿಯ ಸಾಮಾಜಿಕ ಧುರೀಣರೋರ್ವರು ಹೇಳಿದರು.

ಇಂಫಾಲ್‌ನಲ್ಲಿಯ ಸಂಪಾದಕರು ಪರಸ್ಪರರೊಂದಿಗೆ ಸಮಾಲೋಚನೆಗಳನ್ನು ನಡೆಸಿ ಸಾಮಾನ್ಯ ನಿರೂಪಣೆಯನ್ನು ಒಪ್ಪಿಕೊಳ್ಳುವುದರೊಂದಿಗೆ ಸಾಮೂಹಿಕವಾಗಿ ಕಾರ್ಯ ನಿರ್ವಹಿಸಿದ್ದರು. ಅದಾಗಲೇ ಉದ್ವಿಗ್ನಗೊಂಡಿದ್ದ ಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಲು ಅವರು ಬಯಸಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಆದಾಗ್ಯೂ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಇಂತಹ ಕಾರ್ಯ ವಿಧಾನದ ಲೋಪವೆಂದರೆ ಅದು ಸುಲಭವಾಗಿ ಸಾಮಾನ್ಯ ಜನಾಂಗೀಯ ನಿರೂಪಣೆಯನ್ನು ರೂಪಿಸುತ್ತದೆ ಹಾಗೂ ಯಾವುದನ್ನು ವರದಿ ಮಾಡಬೇಕು ಮತ್ತು ಯಾವುದನ್ನು ತಡೆಹಿಡಿಯಬೇಕು ಎಂದು ನಿರ್ಧರಿಸುವ ಮೂಲಕ ಪತ್ರಿಕೋದ್ಯಮ ತತ್ತ್ವಗಳ ಸಾಮೂಹಿಕ ಕುಸಿತಕ್ಕೆ ಕಾರಣವಾಗುತ್ತದೆ ಎಂದು ತಂಡದ ವರದಿಯು ಹೇಳಿದೆ.

ಮಾಧ್ಯಮಗಳು ನಕಲಿ ಸುದ್ದಿಗಳನ್ನು ವರದಿ ಮಾಡಿದ್ದ ಮತ್ತು ತಪ್ಪುಮಾಹಿತಿಗಳನ್ನು ಹರಡಿದ್ದ 10ಕ್ಕೂ ಹೆಚ್ಚಿನ ನಿದರ್ಶನಗಳನ್ನು ಬೆಟ್ಟು ಮಾಡಿರುವ ಎಡಿಟರ್ಸ್ ಗಿಲ್ಡ್, ಇಂಫಾಲ ಮಾಧ್ಯಮಗಳಲ್ಲಿ ಮಾತ್ರ ಪ್ರಕಟಗೊಳ್ಳುವ ಸುಳ್ಳುಸುದ್ದಿಗಳ ಮೂಲಕ ಜನಾಂಗೀಯ ವಿಭಜನೆಯು ಹಂತಹಂತವಾಗಿ ಆಳಗೊಳ್ಳುತ್ತಿರುವುದು ಈಗ ಗೋಚರಿಸುತ್ತಿದೆ ಎಂದು ಹೇಳಿದೆ.

ಇಂಫಾಲನಲ್ಲಿಯ ಮಾಧ್ಯಮಗಳು ಭದ್ರತಾ ಪಡೆಗಳನ್ನು,ವಿಶೇಷವಾಗಿ ಅಸ್ಸಾಂ ರೈಫಲ್ಸನ್ನು ದೂಷಿಸಿದ್ದವು ಎಂದು ಹೇಳಿರುವ ವರದಿಯು,ರಾಜ್ಯ ಸರಕಾರವು ಸಹ ಅಸ್ಸಾಂ ರೈಫಲ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ಮಣಿಪುರ ಪೋಲಿಸರಿಗೆ ಅವಕಾಶ ನೀಡುವ ಮೂಲಕ ಈ ದೂಷಣೆಯನ್ನು ಮೌನವಾಗಿ ಬೆಂಬಲಿಸಿತ್ತು. ಸರಕಾರದ ಒಂದು ಕೈಗೆ ಇನ್ನೊಂದು ಕೈ ಏನು ಮಾಡುತ್ತಿದೆ ಎನ್ನುವುದು ತಿಳಿದಿರಲಿಲ್ಲ ಅಥವಾ ಇದು ಉದ್ದೇಶಪೂರ್ವಕ ಕ್ರಮವಾಗಿತ್ತು ಎನ್ನುವುದನ್ನು ಇದು ಸೂಚಿಸುತ್ತಿದೆ ಎಂದು ಬೆಟ್ಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...