Homeಮುಖಪುಟಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

ಮಣಿಪುರ ಸಂಘರ್ಷ: ಎಡಿಟರ್ಸ್ ಗಿಲ್ಡ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಅಲ್ಲಿಯ ಕೆಲವು ಪತ್ರಕರ್ತರು ಏಕಪಕ್ಷೀಯವಾಗಿ ವರದಿ ಮಾಡಿದ್ದಾರೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸತ್ಯಶೋಧನಾ ತಂಡ ಶನಿವಾರ ವರದಿ ಬಿಡುಗಡೆ ಮಾಡಿದೆ. ಈ ವರದಿಗೆ ಸಂಬಂಧಿಸಿದಂತೆ ಸತ್ಯಶೋಧನಾ ತಂಡದ ಮೂವರ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66Aಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದರೂ ಸಹ ಪೊಲೀಸರು ಜಾರಿಯಲ್ಲಿಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಈ ನಿಬಂಧನೆಯ ಅಡಿಯಲ್ಲಿ ಯಾರನ್ನೂ ವಿಚಾರಣೆಗೆ ಒಳಪಡಿಸಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

”ಆಕ್ಷೇಪಾರ್ಹ ಮತ್ತು ಬೆದರಿಕೆಯ” ಪೋಸ್ಟಗಳನ್ನು ಆನ್‌ಲೈನ್ ಬರೆಯುವ ವ್ಯಕ್ತಿಗಳನ್ನು ಬಂಧಿಸಲು ಮತ್ತು ಜೈಲಿನಲ್ಲಿಡಲು ಸರ್ಕಾರಕ್ಕೆ ಸೆಕ್ಷನ್ 66A ಅಡಿಯಲ್ಲಿ ಅಧಿಕಾರವನ್ನು ನೀಡಿದೆ.

ಸತ್ಯಶೋಧನಾ ತಂಡದ ಮೂವರ ವಿರುದ್ಧ ”ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವುದು  ಅಥವಾ ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವ ಉದ್ದೇಶಪೂರ್ವಕವಾಗಿ ಮಾತನಾಡುವುದು ಮತ್ತು ಸಾರ್ವಜನಿಕವಾಗಿ ಗಲಭೆಗೆ ಪ್ರಚೋದಿಸುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿಯ ಲೇಖಕರಾದ ಸೀಮಾ ಗುಹಾ, ಭರತ್ ಭೂಷಣ್, ಸಂಜಯ್ ಕಪೂರ್ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಅಧ್ಯಕ್ಷೆ ಸೀಮಾ ಮುಸ್ತಫಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವರದಿಯು “ಸುಳ್ಳು, ಮತ್ತು ಪ್ರಾಯೋಜಿತ” ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ವರದಿಯಲ್ಲಿನ ಫೋಟೋವು ಕುಕಿ ಮನೆಯಿಂದ ಹೊಗೆ ಏರುತ್ತಿದೆ ಎಂದು ತಪ್ಪಾಗಿ ಹೇಳಲಾಗಿದೆ, ಆದರೆ ಅದು ವಾಸ್ತವವಾಗಿ ಅರಣ್ಯ ಅಧಿಕಾರಿಯ ಕಚೇರಿಯಾಗಿದೆ. ವರದಿಯು ಸುಳ್ಳು ಮತ್ತು ಕುಕಿ ಉಗ್ರಗಾಮಿಗಳಿಂದ ಪ್ರಾಯೋಜಿತವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ಯುದ್ಧಭೂಮಿ ಮಣಿಪುರದ ಚದುರಿದ ಚಿತ್ರಗಳು

ವರದಿ ಏನು ಹೇಳಿದೆ?

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಕುರಿತು ವರದಿಗಾರಿಕೆ ಮಾಡುವಾಗ ಅಲ್ಲಿಯ ಪತ್ರಕರ್ತರು ಏಕಪಕ್ಷೀಯ ವರದಿಗಳನ್ನು ಬರೆದಿದ್ದರು ಎಂದು ಶನಿವಾರ ಬಿಡುಗಡೆಗೊಂಡ ಎಡಿಟರ್ಸ್ ಗಿಲ್ಡ್‌ನ ಸತ್ಯಶೋಧನಾ ತಂಡವು ತನ್ನ ವರದಿಯಲ್ಲಿ ಹೇಳಿದೆ.

ಸಾಮಾನ್ಯ ಸಂದರ್ಭಗಳಲ್ಲಿ ಪತ್ರಿಕೆಗಳ ಸಂಪಾದಕರು ಅಥವಾ ಸ್ಥಳೀಯಾಡಳಿತದ ಸ್ಥಳೀಯ ಬ್ಯೂರೊಗಳ ಮುಖ್ಯಸ್ಥರು, ಪೊಲೀಸರು ಮತ್ತು ಭದ್ರತಾ ಪಡೆಗಳು ಈ ವರದಿಗಳನ್ನು ಪುನರ್‌ಪರಿಶೀಲಿಸುತ್ತಾರೆ. ಆದರೆ ಸಂಘರ್ಷದ ಸಮಯದಲ್ಲಿ ಇದು ಸಾಧ್ಯವಾಗಿರಲಿಲ್ಲ ಎನ್ನುವುದನ್ನು ವರದಿಯು ಗಮನಿಸಿದೆ.

ಮೈತಿಗಳು ಮತ್ತು ಕುಕಿಗಳ ನಡುವೆ ಘರ್ಷಣೆಗಳು ಆರಂಭಗೊಂಡಿದ್ದ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಇಂಟರ್ನೆಟ್ ನಿಷೇಧ ಹೇರಲಾಗಿದ್ದರಿಂದ ಮಣಿಪುರದಿಂದ ವರದಿಗಾರಿಕೆ ಕಷ್ಟವಾಗಿತ್ತು. ಯಾವುದೇ ಸಂವಹನ ಸೌಲಭ್ಯಗಳಿಲ್ಲದೆ ಸಂಗ್ರಹಿಸಲಾಗಿದ್ದ ಸ್ಥಳೀಯ ಸುದ್ಧಿಗಳು ಪರಿಸ್ಥಿತಿಯ ಸಮತೋಲಿತ ನೋಟವನ್ನು ನೀಡುವಷ್ಟಿರಲಿಲ್ಲ ಎನ್ನುವುದನ್ನು ಎಡಿಟರ್ಸ್ ಗಿಲ್ಡ್ ಕಂಡುಕೊಂಡಿದೆ.

ಮೇ 3ರಂದು ಘರ್ಷಣೆಗಳು ಆರಂಭಗೊಂಡ ಬಳಿಕ ಚುರಾಚಂದ್ರಪುರ,ಕಾಂಗ್‌ಪೊಕ್ಪಿ ಮತ್ತು ತೆಂಗನೌಪಾಲ್‌ನಂತಹ ಕುಕಿ ಬಹುಸಂಖ್ಯಾತ ಜಿಲ್ಲೆಗಳಿಂದ ತಳಮಟ್ಟದ ವರದಿಗಾರಿಕೆ ನಡೆದಿರಲಿಲ್ಲ ಎಂದು ಮೂವರು ಸದಸ್ಯರ ಸತ್ಯಶೋಧನಾ ತಂಡವು ಹೇಳಿದೆ. ಮೇ ಮಧ್ಯಭಾಗದಿಂದ ಗುಡ್ಡಗಾಡು ಜಿಲ್ಲೆಗಳಲ್ಲಿಯ ತಮ್ಮ ಪ್ರತಿನಿಧಿಗಳು ಫೋನ್ ಕರೆಗಳಿಗೆ ಉತ್ತರಿಸುವುದನ್ನೂ ನಿಲ್ಲಿಸಿದ್ದರು ಎಂದು ಪತ್ರಕರ್ತರು ತನಗೆ ತಿಳಿಸಿದ್ದರು ಎಂದು ಎಡಿಟರ್ಸ್ ಗಿಲ್ಡ್‌ನೊಂದಿಗೆ ಮಾತನಾಡಿದ ಇಂಫಾಲ್‌ನ ಹಿರಿಯ ಸಾಮಾಜಿಕ ಧುರೀಣರೋರ್ವರು ಹೇಳಿದರು.

ಇಂಫಾಲ್‌ನಲ್ಲಿಯ ಸಂಪಾದಕರು ಪರಸ್ಪರರೊಂದಿಗೆ ಸಮಾಲೋಚನೆಗಳನ್ನು ನಡೆಸಿ ಸಾಮಾನ್ಯ ನಿರೂಪಣೆಯನ್ನು ಒಪ್ಪಿಕೊಳ್ಳುವುದರೊಂದಿಗೆ ಸಾಮೂಹಿಕವಾಗಿ ಕಾರ್ಯ ನಿರ್ವಹಿಸಿದ್ದರು. ಅದಾಗಲೇ ಉದ್ವಿಗ್ನಗೊಂಡಿದ್ದ ಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಲು ಅವರು ಬಯಸಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಆದಾಗ್ಯೂ ಜನಾಂಗೀಯ ಹಿಂಸಾಚಾರದ ಸಂದರ್ಭದಲ್ಲಿ ಇಂತಹ ಕಾರ್ಯ ವಿಧಾನದ ಲೋಪವೆಂದರೆ ಅದು ಸುಲಭವಾಗಿ ಸಾಮಾನ್ಯ ಜನಾಂಗೀಯ ನಿರೂಪಣೆಯನ್ನು ರೂಪಿಸುತ್ತದೆ ಹಾಗೂ ಯಾವುದನ್ನು ವರದಿ ಮಾಡಬೇಕು ಮತ್ತು ಯಾವುದನ್ನು ತಡೆಹಿಡಿಯಬೇಕು ಎಂದು ನಿರ್ಧರಿಸುವ ಮೂಲಕ ಪತ್ರಿಕೋದ್ಯಮ ತತ್ತ್ವಗಳ ಸಾಮೂಹಿಕ ಕುಸಿತಕ್ಕೆ ಕಾರಣವಾಗುತ್ತದೆ ಎಂದು ತಂಡದ ವರದಿಯು ಹೇಳಿದೆ.

ಮಾಧ್ಯಮಗಳು ನಕಲಿ ಸುದ್ದಿಗಳನ್ನು ವರದಿ ಮಾಡಿದ್ದ ಮತ್ತು ತಪ್ಪುಮಾಹಿತಿಗಳನ್ನು ಹರಡಿದ್ದ 10ಕ್ಕೂ ಹೆಚ್ಚಿನ ನಿದರ್ಶನಗಳನ್ನು ಬೆಟ್ಟು ಮಾಡಿರುವ ಎಡಿಟರ್ಸ್ ಗಿಲ್ಡ್, ಇಂಫಾಲ ಮಾಧ್ಯಮಗಳಲ್ಲಿ ಮಾತ್ರ ಪ್ರಕಟಗೊಳ್ಳುವ ಸುಳ್ಳುಸುದ್ದಿಗಳ ಮೂಲಕ ಜನಾಂಗೀಯ ವಿಭಜನೆಯು ಹಂತಹಂತವಾಗಿ ಆಳಗೊಳ್ಳುತ್ತಿರುವುದು ಈಗ ಗೋಚರಿಸುತ್ತಿದೆ ಎಂದು ಹೇಳಿದೆ.

ಇಂಫಾಲನಲ್ಲಿಯ ಮಾಧ್ಯಮಗಳು ಭದ್ರತಾ ಪಡೆಗಳನ್ನು,ವಿಶೇಷವಾಗಿ ಅಸ್ಸಾಂ ರೈಫಲ್ಸನ್ನು ದೂಷಿಸಿದ್ದವು ಎಂದು ಹೇಳಿರುವ ವರದಿಯು,ರಾಜ್ಯ ಸರಕಾರವು ಸಹ ಅಸ್ಸಾಂ ರೈಫಲ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ಮಣಿಪುರ ಪೋಲಿಸರಿಗೆ ಅವಕಾಶ ನೀಡುವ ಮೂಲಕ ಈ ದೂಷಣೆಯನ್ನು ಮೌನವಾಗಿ ಬೆಂಬಲಿಸಿತ್ತು. ಸರಕಾರದ ಒಂದು ಕೈಗೆ ಇನ್ನೊಂದು ಕೈ ಏನು ಮಾಡುತ್ತಿದೆ ಎನ್ನುವುದು ತಿಳಿದಿರಲಿಲ್ಲ ಅಥವಾ ಇದು ಉದ್ದೇಶಪೂರ್ವಕ ಕ್ರಮವಾಗಿತ್ತು ಎನ್ನುವುದನ್ನು ಇದು ಸೂಚಿಸುತ್ತಿದೆ ಎಂದು ಬೆಟ್ಟು ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...