Homeಮುಖಪುಟಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ 

- Advertisement -
- Advertisement -

ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರವು ಜುಲೈ 2024 ರಲ್ಲಿ ಕುಕಿ-ಝೋ ಉಗ್ರಗಾಮಿ ಗುಂಪಿಗೆ ₹6.27 ಕೋಟಿಗಳನ್ನು ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ನಾನು ಅದರ ಬಗ್ಗೆ ಏನೂ ಹೇಳಬೇಕಾಗಿಲ್ಲ” ಎಂದು ನೇರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಂಬಂಧಿತ ಅಧಿಕಾರಿಗಳು ಸೂಕ್ತ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು, “ಆ ಹಣವನ್ನು ಕಾರ್ಯಾಚರಣೆಗಳ ಅಮಾನತು ಒಪ್ಪಂದಕ್ಕೆ ಸಹಿ ಹಾಕಿದ ಹ್ಮಾರ್ ಪೀಪಲ್ಸ್ ಕನ್ವೆನ್ಷನ್ (ಡೆಮಾಕ್ರಟಿಕ್) ಸಂಘಟನೆಗೆ ನೀಡಲಾಗಿದೆ. ಆದರೂ, ರಾಜ್ಯ ಸರ್ಕಾರ ಫೆಬ್ರವರಿ 2023 ರಲ್ಲಿ ಒಪ್ಪಂದದಿಂದ ಹಿಂದೆ ಸರಿದಿತ್ತು” ಎಂದು ಶನಿವಾರ ಹೇಳಿದ್ದರು.

ಒಪ್ಪಂದದಲ್ಲಿ ನಿಗದಿಪಡಿಸಲಾದ ಷರತ್ತುಗಳ ಪ್ರಕಾರ, ಎಚ್‌ಪಿಸಿ-ಡಿ ಸದಸ್ಯರಿಗೆ ಮಣಿಪುರದಲ್ಲಿ ಎಲ್ಲಿಯಾದರೂ ಬಂದೂಕುಗಳಿಲ್ಲದೆ ಮುಕ್ತವಾಗಿ ಚಲಿಸಲು ಅವಕಾಶ ನೀಡಲಾಗುವುದು. ಭದ್ರತಾ ಪಡೆಗಳು ನಿಯಮಗಳು ಮತ್ತು ಷರತ್ತುಗಳನ್ನು ಉಲ್ಲಂಘಿಸದ ಹೊರತು ಅದರ ಸದಸ್ಯರ ವಿರುದ್ಧ ಯಾವುದೇ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಿಲ್ಲ ಎಂದು ಮಾತುಕತೆಯಾಗಿದೆ.

“ಸಂಘರ್ಷದ ಉತ್ತುಂಗದಲ್ಲಿದ್ದಾಗ, ರಾಜ್ಯ ಸರ್ಕಾರವು ಜುಲೈ 2024 ರಲ್ಲಿ ಎಚ್‌ಪಿಸಿ-ಡಿ ಗೆ ಚೆಕ್ ಮೂಲಕ ₹6.27 ಕೋಟಿಗಳನ್ನು ನೀಡಿತು. ಆದರೂ ರಾಜ್ಯ ಸರ್ಕಾರವು ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಮೊದಲೇ ತಿಳಿಸಿತ್ತು” ಎಂದು ಮೇಘಚಂದ್ರ ಇಂಫಾಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಜನವರಿ 21, 2024 ರಂದು, ಬಿಜೆಪಿ ಶಾಸಕರು ಕುಕಿ-ಝೋ ಸಶಸ್ತ್ರ ಗುಂಪುಗಳೊಂದಿಗಿನ ಒಪ್ಪಂದವನ್ನು ಹಿಂತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಿದರು. ಅದೇ ರೀತಿ, ಫೆಬ್ರವರಿ 29, 2024 ರಂದು, ಮಣಿಪುರ ವಿಧಾನಸಭೆಯು ಕುಕಿ-ಝೋ ಉಗ್ರಗಾಮಿಗಳೊಂದಿಗಿನ ಒಪ್ಪಂದವನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯವನ್ನು ಅಂಗೀಕರಿಸಿತು” ಎಂದು ಅವರು ಆರೋಪಿಸಿದರು.

ಒಪ್ಪಂದ ಹಿಂತೆಗೆದುಕೊಂಡಿದ್ದರೂ, ಬಿಡುಗಡೆ ಮಾಡಲಾಗುತ್ತಿರುವ ಹಣವು ಕೇಂದ್ರ ಸರ್ಕಾರದದ್ದಲ್ಲ, ರಾಜ್ಯ ಸರ್ಕಾರದದ್ದು ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಜುಲೈ 9, 2024 ರಂದು ಇಬ್ಬರು ಎಚ್‌ಪಿಸಿ-ಡಿ ಸದಸ್ಯರಿಗೆ ಚೆಕ್ ಮೂಲಕ ₹6.27 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮೇಘಚಂದ್ರ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವುದಾಗಿ ಅವರು ಪ್ರತಿಪಾದಿಸಿದರು. ಆದರೆ, ಸದನದ ನಾಯಕರು ಅಂತಹ ವಹಿವಾಟು ನಡೆದಿರುವುದನ್ನು ನಿರಾಕರಿಸಿದರು. “ಸದನದ ನಾಯಕರಾಗಿ ಮುಖ್ಯಮಂತ್ರಿಗಳು ರಾಜ್ಯ ವಿಧಾನಸಭೆಯನ್ನು ದಾರಿ ತಪ್ಪಿಸಿದ್ದಾರೆ ಎಂಬುದನ್ನು ಸಾಬೀತುಪಡಿಸುವ ವಿವರವಾದ ಪುರಾವೆಗಳನ್ನು ನಾನು ಪಡೆದುಕೊಂಡಿದ್ದೇನೆ” ಎಂದು ಅವರು ಆರೋಪಿಸಿದ್ದಾರೆ.


ಮಣಿಪುರದಲ್ಲಿ ಮತ್ತೆ ಅಶಾಂತಿ; 2 ಗ್ರಾಮಗಳಲ್ಲಿ ಕರ್ಫ್ಯೂ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...