Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...