Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...