Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...