Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...