Homeಮುಖಪುಟಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ನವದೆಹಲಿ: ಭಿನ್ನಾಭಿಪ್ರಾಯ ಹಾಗೂ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಣಿಪುರದ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯ ಕಾಂಗ್ರೆಸ್ ವಕ್ತಾರೊಬ್ಬರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದೆ. ಹಿಂದಿಯನ್ನು ಪ್ರಚಾರ ಮಾಡಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಲಹೆ ನೀಡಿರುವುದನ್ನು ಟೀಕಿಸಿದ್ದಕ್ಕಾಗಿ ದೇಶದ್ರೋಹದ ಕೇಸ್ ಹಾಕಲಾಗಿದೆ.

ಬಿಜೆಪಿ ಯುವ ಮೊರ್ಚಾದ ರಾಜ್ಯಾಧ್ಯಕ್ಷ ಎಂ. ಭರೀಶ್ ಶರ್ಮಾ ಅವರು ಏಪ್ರಿಲ್ 11ರಂದು ನೀಡಿದ ದೂರಿನ ಆಧಾರದ ಮೇಲೆ ಮಣಿಪುರ ಪೊಲೀಸರು ಇಂಫಾಲ್ ಮೂಲದ ವಕೀಲ, ಕಾಂಗ್ರೆಸ್‌ ವಕ್ತಾರ ಸನೌಜಮ್ ಶ್ಯಾಮಚರಣ್ ಸಿಂಗ್ (ಸನೂ) ಅವರನ್ನು ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ವರದಿಗಳ ಪ್ರಕಾರ, ದೂರಿನ ಮೇರೆಗೆ ಇಂಫಾಲ್ ಪೊಲೀಸರ ತಂಡವು ಏಪ್ರಿಲ್ 12ರಂದು ಬೆಳಗಿನ ಜಾವ 1 ಗಂಟೆಗೆ ಸನೌರನ್ನು ಬಂಧಿಸಲಾಯಿತು. ಮಂಗಳವಾರ ಸಂಜೆ ಸನೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಸನೂ ವಿರುದ್ಧ ಆರೋಪ ಹೊರಿಸಲಾಗಿದೆ.

ಏಪ್ರಿಲ್ 9ರಂದು ಇಂಪ್ಯಾಕ್ಟ್ ಟಿವಿಯಲ್ಲಿ ಸನೂ ಅವರು ಭಾಗವಹಿಸಿ, ‘ಹಿಂದಿ: ಏಕೀಕರಣ ಅಥವಾ ಹೇರಿಕೆ’ ವಿಷಯದ ಚರ್ಚೆಯಲ್ಲಿ ಮಾತನಾಡಿದ್ದರು.

ಇಂಫಾಲ್‌ನಿಂದ ‘ದಿ ವೈರ್‌’ನೊಂದಿಗೆ ಮಾತನಾಡಿರುವ ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಕೋಶದ ಉಪಾಧ್ಯಕ್ಷರೂ ಆದ ವಕೀಲ ರವಿ ಖಾನ್, “ಸನೂ ಅವರನ್ನು ಏಪ್ರಿಲ್ 12ರಂದು ರಾತ್ರಿ 8:30 ರ ಸುಮಾರಿಗೆ ಇಂಫಾಲ್ ವೆಸ್ಟ್‌ನ ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಒಂದೂವರೆ ಗಂಟೆಗಳ ಕಾಲ ಪೊಲೀಸ್ ಅಥವಾ ನ್ಯಾಯಾಂಗ ಬಂಧನದ ಪರ, ವಿರುದ್ಧದ ವಾದಗಳನ್ನು ಆಲಿಸಿದ ನಂತರ, ಮ್ಯಾಜಿಸ್ಟ್ರೇಟ್ ರಾತ್ರಿ 10 ಗಂಟೆಗೆ ಜಾಮೀನು ನೀಡಿದರು” ಎಂದು ತಿಳಿಸಿದ್ದಾರೆ.

ಪ್ರಕರಣವು ಮುಂದುವರಿಯಲಿದ್ದು, ಮುಂದಿನ ಏಪ್ರಿಲ್ 27ರಂದು ಕೆಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸನೂಗೆ ತಿಳಿಸಲಾಗಿದೆ.

ಸ್ಥಳೀಯ ಬಿಜೆಪಿ ಯುವ ಮುಖಂಡ ನೀಡಿದ ದೂರಿನಲ್ಲಿ, “ಚರ್ಚೆಯ ಸಮಯದಲ್ಲಿ ಸನೂ ಅವರು ಭಾರತದ ಮುಖ್ಯ ಭೂಭಾಗವನ್ನು ನಿಂದಿಸಿದ್ದಾರೆ. ಮಾತ್ರವಲ್ಲದೆ ಅಮಿತ್‌ ಶಾ ವಿರುದ್ಧ ಅಸಭ್ಯ, ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ” ಎಂದು ದೂರಿದ್ದಾರೆ.

“ಆರೋಪಿಯು ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತವಾಗಿ ಅವಮಾನಿಸಿದ್ದಾರೆ. ಭಾರತದ ಹಿಂದೂಗಳನ್ನು ಪ್ರಾಣಿ ಎಂದು ಕರೆದಿದ್ದಾರೆ. ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ. ಇದರಿಂದಾಗಿ ಇಡೀ ಭಾರತದ ಜನಾಂಗೀಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ” ಎಂದು ಆರೋಪಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷೆ ಎ.ಶಾರದಾ ದೇವಿ ಶರ್ಮಾ ದೇಶದ್ರೋಹ ಪ್ರಕರಣವನ್ನು ಸಮರ್ಥಿಸಿದ್ದಾರೆ. ದೇಶಾದ್ಯಂತ ಜನರು ಹಿಂದಿಯನ್ನು ಅಳವಡಿಸಿಕೊಳ್ಳುವಂತೆ ಅಮಿತ್‌ ಶಾ ಹೇಳಿರುವ ವಿಚಾರವನ್ನು ಬದಿಗೊತ್ತಿರುವ ಶಾರದಾ ಶರ್ಮಾ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರ ನಡುವೆ ಈಶಾನ್ಯ ರಾಜ್ಯದಾದ್ಯಂತ ಹಲವಾರು ನಾಗರಿಕ ಸಮಾಜ, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು ಹಿಂದಿ ಹೇರಿಕೆಯ ವಿರುದ್ಧ ಬೀದಿಗಿಳಿದಿವೆ.

ದೇಶದ್ರೋಹ ದುರ್ಬಳಕೆಯೇ?

ದೇಶಾದ್ಯಂತ ಪೊಲೀಸರು ದೇಶದ್ರೋಹದ ಆರೋಪಗಳನ್ನು ತ್ವರಿತವಾಗಿ ಬಳಸುತ್ತಿದ್ದಾರೆ. ಈ ಸೆಕ್ಷನ್ ಅನ್ನು ವಿನಾಕಾರಣ ಬಳಸುತ್ತಿರುವುದು ಚರ್ಚೆಯ ವಿಷಯವಾಗಿದೆ.

ಕೇದಾರ್ ನಾಥ್ ಸಿಂಗ್ ವರ್ಸಸ್‌‌ ಬಿಹಾರ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ಹೀಗೆ ಹೇಳಿದೆ: “ಹೇಳಿಕೆಗಳು, ಎಷ್ಟೇ ಪ್ರಬಲವಾದ ಪದಗಳಿದ್ದರೂ, ಹಿಂಸಾಚಾರವನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿಲ್ಲದಿದ್ದರೆ, ಅವುಗಳನ್ನು ದೇಶದ್ರೋಹವೆಂದು ಪರಿಗಣಿಸಲಾಗುವುದಿಲ್ಲ”.

ಮೇ 2021 ರಲ್ಲಿ, ಸರ್ವೋಚ್ಚ ನ್ಯಾಯಾಲಯವು “ದೇಶದ್ರೋಹದ ಮಿತಿಗಳನ್ನು ವ್ಯಾಖ್ಯಾನಿಸಲು ಸಮಯ ಬಂದಿದೆ” ಎಂದಿತ್ತು.


ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...