Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...