Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...