Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...