Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...