Homeಮುಖಪುಟಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿಗೆ ಸೇರ್ಪಡೆಗೊಂಡಿರುವ 10 ಮಂದಿ ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ

- Advertisement -
- Advertisement -

ಈ ತಿಂಗಳು ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಟಿಕೆಟ್ ಆಕಾಂಕ್ಷಿಗಳಿಗೆ ಭಾರಿ ನಿರಾಸೆ ಉಂಟು ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ನಡೆದಿವೆ. ಜೊತೆಗೆ ಹಲವು ಬಿಜೆಪಿ ಮುಖಂಡರ ರಾಜೀನಾಮೆಗೆ ಕಾರಣವಾಗಿದೆ.

ಬಿಜೆಪಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ, ರಸ್ತೆಗಿಳಿದು ಕಲ್ಲುತೂರಾಟ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ವಿವಿಧೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆಯಾಗಿ ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಬಿಗಿ ಭದ್ರತೆ  ಮಾಡಲಾಗಿದೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

bgg96808

ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಬಿಜೆಪಿಗೆ ಸೇರ್ಪಡೆಗೊಂಡ ಕನಿಷ್ಠ 10 ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಮಣಿಪುರ ಬಿಜೆಪಿ ಮೂರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯವರ ಬಹುತೇಕ ನಿಷ್ಠಾವಂತರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಭಟನೆ ನಂತರ ಟಿಕೆಟ್ ಸಿಗದೆ ನಿರಾಶೆಗೊಂಡವರು ಬಿಜೆಪಿಗೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಿರುವ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಆಸಕ್ತಿ ತೋರಿದ್ದಾರೆ. ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ.

ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಪಿ.ಶರತ್ ಚಂದ್ರ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ. ಸೆಕ್ಮೈ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ನಿಂಗ್‌ತೋಜಮ್ ಬಿರೆನ್ ಮತ್ತು ನಿಂಗ್‌ತೋಜಮ್ ಜೋಯ್‌ಕುಮಾರ್ ಸಿಂಗ್ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಬಿಜೆಪಿ ವಿರುದ್ಧ ಅಸಮಾಧಾನವಿರುವ ಇನ್ನೂ 12 ಬಿಜೆಪಿ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಬಿಜೆಪಿಯಿಂದ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಮಣಿಪುರ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ವಕ್ತಾರ ಕೆ.ಎಚ್.ದೇವಭ್ರತ ತಿಳಿಸಿದ್ದಾರೆ.

2017ರ ನಂತರ ಪಕ್ಷಕ್ಕೆ ಸೇರ್ಪಡೆಯಾದ ನಾಯಕರಿಗೆ ಬಿಜೆಪಿ ಮನ್ನಣೆ ನೀಡಿ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ 16 ಮಂದಿ ಕಾಂಗ್ರೆಸ್‌ ನಾಯಕರಲ್ಲಿ ಹತ್ತು ಮಂದಿ ಕಾಂಗ್ರೆಸ್‌ನವರಿಗೆ ಟಿಕೆಟ್ ನೀಡಲಾಗಿದೆ. 4 ಮಂದಿ ಇತರ ಪಕ್ಷಗಳಿಂದ ಬಂದವರಿಗೂ ಟಿಕೆಟ್ ನೀಡಲಾಗಿದೆ.

2017 ರ ಚುನಾವಣೆಯಲ್ಲಿ, ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ಸರ್ಕಾರ ರಚಿಸಿತು. ಈ ಪೈಕಿ 19 ಶಾಸಕರಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು, ಮೂವರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...