HomeಮುಖಪುಟMANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ...

MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

- Advertisement -
- Advertisement -

MANIPUR ELECTION RESULTS | 60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸರಳ ಬಹುಮತ ಗಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅತಿದೊಡ್ಡ ಸೋಲನ್ನು ಅನುಭವಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಎನ್. ಲೋಕೇನ್ ಸಿಂಗ್ ಅವರು ನಂಬೋಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೌನೊಜಾಮ್ ಬಸಂತ ಕುಮಾರ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿರೆನ್ ಸಿಂಗ್ ಅವರು ಹೈಂಗಾಗ್‌ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಉಪಮುಖ್ಯಮಂತ್ರಿ ವೈ. ಜಯ್‌ಕುಮಾರ್ ಸಿಂಗ್ ಅವರು ಉರಿಪೋಕ್‌ನಲ್ಲಿ ಬಿಜೆಪಿಯ ಖ್ವೈರಕ್‌ಪಂ ರಘುಮಣಿ ಸಿಂಗ್ ವಿರುದ್ಧ ಸೋತಿದ್ದು, ಈ ಮೂಲಕ ಎನ್‌ಪಿಪಿಗೂ ಹೊಡೆತ ಬಿದ್ದಿದೆ. ಒಟ್ಟು 60 ಕ್ಷೇತ್ರಗಳ ಮಣಿಪುರದಲ್ಲಿ ಆಡಳಿತ ನಡೆಸಲು 31 ಕ್ಷೇತ್ರಗಳ ಅಗತ್ಯವಿದೆ.

ಬಿಜೆಪಿ ರಾಜ್ಯದಲ್ಲಿ 32 ಕ್ಷೇತ್ರಗಳನ್ನು ಗೆದ್ದುಕೊಂಡು ಸರಳ ಬಹುಮತವನ್ನು ಪಡೆದುಕೊಂಡಿದೆ. ಈ ಹಿಂದಿನ ಅತ್ಯಂತ ದೊಡ್ಡ ಪಕ್ಷವಾದ ಕಾಂಗ್ರೆಸ್ 5 ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿದ್ದು, ಹೀನಾಯ ಸೋಲನ್ನು ಅನುಭವಿಸಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು 6 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಬಿಜೆಪಿಯ ಜೊತೆಗೆ ಹಿಂದೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳಾದ ನಾಗಾ ಪೀಪಲ್ಸ್‌ ಫ್ರಂಟ್‌ (NPF) ಈಗಾಗಲೇ 5 ಕ್ಷೇತ್ರವನ್ನು ಗೆದ್ದುಕೊಂಡಿದೆ. ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ (NPP) 7 ಕ್ಷೇತ್ರವನ್ನು ಗೆದ್ದುಕೊಂಡಿದ್ದು ರಾಜ್ಯದ ಎರಡನೆ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಆಯ್ಕೆಯಾಗಿದೆ. ಈ ಹಿಂದೆ ಈ ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

2017ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಬಿಜೆಪಿ 21 ಕ್ಷೇತ್ರಗಳನ್ನು ಗೆದ್ದುಕೊಂಡರೆ, NPF ಮತ್ತು NPP ತಲಾ ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಪಕ್ಷೇತರ ಮತ್ತು ಇತರೆ ಪಕ್ಷಗಳು ಮೂರು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.


ಮಣಿಪುರದ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಕೆಳಗಿನಂತಿದೆ.

ರಾಜ್ಯದಲ್ಲಿ 60 ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನಗಳ ಸಾಕಾಗುತ್ತವೆ. 

  • ಬಿಜೆಪಿ – 32 ಗೆಲುವು
  • NPP – 7 ಗೆಲುವು
  • NPF  5 ಗೆಲುವು
  • ಕಾಂಗ್ರೆಸ್5 ಗೆಲುವು
  • JDU 6 ಗೆಲುವು
  • ಪಕ್ಷೇತರ – 3 ಗೆಲುವು
  • KPA – 2 ಗೆಲುವು

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...