HomeಮುಖಪುಟMANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ...

MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

- Advertisement -
- Advertisement -

MANIPUR ELECTION RESULTS | 60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸರಳ ಬಹುಮತ ಗಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅತಿದೊಡ್ಡ ಸೋಲನ್ನು ಅನುಭವಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಎನ್. ಲೋಕೇನ್ ಸಿಂಗ್ ಅವರು ನಂಬೋಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೌನೊಜಾಮ್ ಬಸಂತ ಕುಮಾರ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿರೆನ್ ಸಿಂಗ್ ಅವರು ಹೈಂಗಾಗ್‌ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಉಪಮುಖ್ಯಮಂತ್ರಿ ವೈ. ಜಯ್‌ಕುಮಾರ್ ಸಿಂಗ್ ಅವರು ಉರಿಪೋಕ್‌ನಲ್ಲಿ ಬಿಜೆಪಿಯ ಖ್ವೈರಕ್‌ಪಂ ರಘುಮಣಿ ಸಿಂಗ್ ವಿರುದ್ಧ ಸೋತಿದ್ದು, ಈ ಮೂಲಕ ಎನ್‌ಪಿಪಿಗೂ ಹೊಡೆತ ಬಿದ್ದಿದೆ. ಒಟ್ಟು 60 ಕ್ಷೇತ್ರಗಳ ಮಣಿಪುರದಲ್ಲಿ ಆಡಳಿತ ನಡೆಸಲು 31 ಕ್ಷೇತ್ರಗಳ ಅಗತ್ಯವಿದೆ.

ಬಿಜೆಪಿ ರಾಜ್ಯದಲ್ಲಿ 32 ಕ್ಷೇತ್ರಗಳನ್ನು ಗೆದ್ದುಕೊಂಡು ಸರಳ ಬಹುಮತವನ್ನು ಪಡೆದುಕೊಂಡಿದೆ. ಈ ಹಿಂದಿನ ಅತ್ಯಂತ ದೊಡ್ಡ ಪಕ್ಷವಾದ ಕಾಂಗ್ರೆಸ್ 5 ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿದ್ದು, ಹೀನಾಯ ಸೋಲನ್ನು ಅನುಭವಿಸಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು 6 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಬಿಜೆಪಿಯ ಜೊತೆಗೆ ಹಿಂದೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳಾದ ನಾಗಾ ಪೀಪಲ್ಸ್‌ ಫ್ರಂಟ್‌ (NPF) ಈಗಾಗಲೇ 5 ಕ್ಷೇತ್ರವನ್ನು ಗೆದ್ದುಕೊಂಡಿದೆ. ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ (NPP) 7 ಕ್ಷೇತ್ರವನ್ನು ಗೆದ್ದುಕೊಂಡಿದ್ದು ರಾಜ್ಯದ ಎರಡನೆ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಆಯ್ಕೆಯಾಗಿದೆ. ಈ ಹಿಂದೆ ಈ ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

2017ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಬಿಜೆಪಿ 21 ಕ್ಷೇತ್ರಗಳನ್ನು ಗೆದ್ದುಕೊಂಡರೆ, NPF ಮತ್ತು NPP ತಲಾ ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಪಕ್ಷೇತರ ಮತ್ತು ಇತರೆ ಪಕ್ಷಗಳು ಮೂರು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.


ಮಣಿಪುರದ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಕೆಳಗಿನಂತಿದೆ.

ರಾಜ್ಯದಲ್ಲಿ 60 ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನಗಳ ಸಾಕಾಗುತ್ತವೆ. 

  • ಬಿಜೆಪಿ – 32 ಗೆಲುವು
  • NPP – 7 ಗೆಲುವು
  • NPF  5 ಗೆಲುವು
  • ಕಾಂಗ್ರೆಸ್5 ಗೆಲುವು
  • JDU 6 ಗೆಲುವು
  • ಪಕ್ಷೇತರ – 3 ಗೆಲುವು
  • KPA – 2 ಗೆಲುವು

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...