HomeಮುಖಪುಟMANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ...

MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

- Advertisement -
- Advertisement -

MANIPUR ELECTION RESULTS | 60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸರಳ ಬಹುಮತ ಗಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅತಿದೊಡ್ಡ ಸೋಲನ್ನು ಅನುಭವಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಎನ್. ಲೋಕೇನ್ ಸಿಂಗ್ ಅವರು ನಂಬೋಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೌನೊಜಾಮ್ ಬಸಂತ ಕುಮಾರ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿರೆನ್ ಸಿಂಗ್ ಅವರು ಹೈಂಗಾಗ್‌ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಉಪಮುಖ್ಯಮಂತ್ರಿ ವೈ. ಜಯ್‌ಕುಮಾರ್ ಸಿಂಗ್ ಅವರು ಉರಿಪೋಕ್‌ನಲ್ಲಿ ಬಿಜೆಪಿಯ ಖ್ವೈರಕ್‌ಪಂ ರಘುಮಣಿ ಸಿಂಗ್ ವಿರುದ್ಧ ಸೋತಿದ್ದು, ಈ ಮೂಲಕ ಎನ್‌ಪಿಪಿಗೂ ಹೊಡೆತ ಬಿದ್ದಿದೆ. ಒಟ್ಟು 60 ಕ್ಷೇತ್ರಗಳ ಮಣಿಪುರದಲ್ಲಿ ಆಡಳಿತ ನಡೆಸಲು 31 ಕ್ಷೇತ್ರಗಳ ಅಗತ್ಯವಿದೆ.

ಬಿಜೆಪಿ ರಾಜ್ಯದಲ್ಲಿ 32 ಕ್ಷೇತ್ರಗಳನ್ನು ಗೆದ್ದುಕೊಂಡು ಸರಳ ಬಹುಮತವನ್ನು ಪಡೆದುಕೊಂಡಿದೆ. ಈ ಹಿಂದಿನ ಅತ್ಯಂತ ದೊಡ್ಡ ಪಕ್ಷವಾದ ಕಾಂಗ್ರೆಸ್ 5 ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿದ್ದು, ಹೀನಾಯ ಸೋಲನ್ನು ಅನುಭವಿಸಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು 6 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಬಿಜೆಪಿಯ ಜೊತೆಗೆ ಹಿಂದೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳಾದ ನಾಗಾ ಪೀಪಲ್ಸ್‌ ಫ್ರಂಟ್‌ (NPF) ಈಗಾಗಲೇ 5 ಕ್ಷೇತ್ರವನ್ನು ಗೆದ್ದುಕೊಂಡಿದೆ. ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ (NPP) 7 ಕ್ಷೇತ್ರವನ್ನು ಗೆದ್ದುಕೊಂಡಿದ್ದು ರಾಜ್ಯದ ಎರಡನೆ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಆಯ್ಕೆಯಾಗಿದೆ. ಈ ಹಿಂದೆ ಈ ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

2017ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಬಿಜೆಪಿ 21 ಕ್ಷೇತ್ರಗಳನ್ನು ಗೆದ್ದುಕೊಂಡರೆ, NPF ಮತ್ತು NPP ತಲಾ ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಪಕ್ಷೇತರ ಮತ್ತು ಇತರೆ ಪಕ್ಷಗಳು ಮೂರು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.


ಮಣಿಪುರದ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಕೆಳಗಿನಂತಿದೆ.

ರಾಜ್ಯದಲ್ಲಿ 60 ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನಗಳ ಸಾಕಾಗುತ್ತವೆ. 

  • ಬಿಜೆಪಿ – 32 ಗೆಲುವು
  • NPP – 7 ಗೆಲುವು
  • NPF  5 ಗೆಲುವು
  • ಕಾಂಗ್ರೆಸ್5 ಗೆಲುವು
  • JDU 6 ಗೆಲುವು
  • ಪಕ್ಷೇತರ – 3 ಗೆಲುವು
  • KPA – 2 ಗೆಲುವು

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...