Homeಮುಖಪುಟಮಣಿಪುರ: ಗುಂಡಿನ ದಾಳಿಗೆ ಇವಿಎಂಗಳು ಧ್ವಂಸ, 11 ಮತಗಟ್ಟೆಗಳಲ್ಲಿ ಮರು ಮತದಾನ

ಮಣಿಪುರ: ಗುಂಡಿನ ದಾಳಿಗೆ ಇವಿಎಂಗಳು ಧ್ವಂಸ, 11 ಮತಗಟ್ಟೆಗಳಲ್ಲಿ ಮರು ಮತದಾನ

- Advertisement -
- Advertisement -

ಮತಗಟ್ಟೆಗಳಲ್ಲಿ ನಡೆದ ಗುಂಡಿನ ದಾಳಿಯಿಂದ ಇವಿಎಂಗಳಯ ಧ್ವಂಸಗೊಂಡಿದ್ದು, ಏಪ್ರಿಲ್ 22ರಂದು ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರು ಮತದಾನ ಮಾಡುವುದಾಗಿ ಮಣಿಪುರ ಮುಖ್ಯ ಚುನಾವಣಾಧಿಕಾರಿ ಘೋಷಿಸಿದ್ದಾರೆ.

ಏಪ್ರಿಲ್ 19 ರಂದು ಈ ಕೇಂದ್ರಗಳಲ್ಲಿ ನಡೆದ ಚುನಾವಣೆಗಳನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸಲಾಗಿದ್ದು, ಹೊಸ ಮತದಾನದ ದಿನಾಂಕವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ, ಕ್ಷೇತ್ರಗಾವೊದಲ್ಲಿ ನಾಲ್ಕು ಮತ್ತು ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ ಒಂದು, ಉರಿಪೋಕ್‌ನಲ್ಲಿ ಮೂರು, ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್‌ನಲ್ಲಿ ಒಂದು ಮತಗಟ್ಟೆಗಳು ಗುಂಡಿನ ದಾಳಿಯಿಂದ ಬಾಧಿತವಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ಮತ್ತು ಬೂತ್ ವಶಪಡಿಸಿಕೊಂಡ ಆರೋಪಗಳು ಸಂಘರ್ಷ ಪೀಡಿತ ಮಣಿಪುರದಿಂದ ವರದಿಯಾಗಿವೆ. ಶುಕ್ರವಾರದಂದು ಎರಡು ಲೋಕಸಭಾ ಕ್ಷೇತ್ರಗಳಾದ ಒಳ ಮಣಿಪುರ ಮತ್ತು ಹೊರ ಮಣಿಪುರದಲ್ಲಿ ಶೇಕಡಾ 72 ರಷ್ಟು ಮತದಾನವಾಗಿದೆ.

ಇದಕ್ಕೂ ಮುನ್ನ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮರು ಮತದಾನಕ್ಕೆ ಒತ್ತಾಯಿಸಿತ್ತು.

ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ ಒಳ ಕ್ಷೇತ್ರದ 36 ಮತ್ತು ಹೊರ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ ಎಂದರು.

ಇದನ್ನೂ ಓದಿ; ಬಿಜೆಪಿಗೆ ಅನುಕೂಲವಾಗಲು ಏಳು ಹಂತಗಳಲ್ಲಿ ಮತದಾನ: ಚುನಾವಣಾ ಆಯೋಗದ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...