Homeಮುಖಪುಟಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

ಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

- Advertisement -
- Advertisement -

ಮಣಿಪುರದಲ್ಲಿ ಅಸ್ಸಾಂ ರೈಪಲ್ಸ್ ಘಟಕದ ವಿರುದ್ಧ ಸ್ಥಳೀಯ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಡಿದ್ದಾರೆ.

ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್ ಘಟಕದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 5 ರಂದು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ಪೊಲೀಸ್ ತಂಡವನ್ನು ಅಡ್ಡಿ ಮಾಡಿದ್ದಾರೆ ಮತ್ತು ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಕುಕಿ ದಂಗೆಕೋರರು ಮೂವರು ಮೈತೈ ಜನರನ್ನು ಕೊಲೆ ಮಾಡಿ ಪಲಾಯನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಫೌಗಕ್ಚಾವೊ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಲಾಗಿದೆ. ಆಗಸ್ಟ್ 5 ರ ಬೆಳ್ಳಂಬೆಳಗ್ಗೆ ಮೂವರ ಹತ್ಯೆಯಾದಾಗಿನಿಂದ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ.

ಮಣಿಪುರ ಪೊಲೀಸರು  ಅಸ್ಸಾಂ ರೈಫಲ್ಸ್ ಗಳ ಬದಲಿಗೆ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸ್ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್-ಕಾಂಗ್‌ವೈ ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲು ನಿರ್ಧರಿಸಿದ್ದಾರೆ.

ಮೈತೈ ಪ್ರಭಾವಿ ಮಹಿಳಾ ಜಾಗೃತ ವಿಭಾಗ “ಮೀರಾ ಪೈಬಿಸ್” ಅಸ್ಸಾಂ ರೈಫಲ್ಸ್ ನ್ನು ಸಂಘರ್ಷ ಪೀಡಿತ ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಸ್ಸಾಂ ರೈಫಲ್ಸ್  ಪಕ್ಷಪಾತ ಮಾಡಿದೆ ಎಂದು ಆರೋಪಿಸಲಾಗಿದೆ.

ಇನ್ನೊಂದು ಕಡೆ ಅಸ್ಸಾಂ ರೈಫಲ್ಸ್ ಘಟಕ ಮತ್ತು ಭಾರತೀಯ ಸೇನೆ ಮೈತೈ ಮಹಿಳಾ ಗುಂಪುಗಳು ತಮ್ಮ ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫೌಗಕ್‌ಚಾವೊ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ಆಗಸ್ಟ್ 5 ರಂದು ಬೆಳಿಗ್ಗೆ 6.30 ರ ಸುಮಾರಿಗೆ 9 ಅಸ್ಸಾಂ ರೈಫಲ್ಸ್‌ಗಳು ತಮ್ಮ ವಾಹನಗಳನ್ನು ಬಳಸಿ ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯಲ್ಲಿ ಪೊಲೀಸ್ ತಂಡವನ್ನು ತಡೆದಿದ್ದಾರೆ ಎಂದು ಪ್ರಭಾರಿ ಅಧಿಕಾರಿ ಎನ್. ದೇವದಾಸ್ ಸಿಂಗ್ ಆರೋಪಿಸಿದ್ದಾರೆ.

ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯ ನಡುವಿನ ಕ್ವಾಕ್ಟಾದ ವಾರ್ಡ್ ಸಂಖ್ಯೆ 8 ರಲ್ಲಿ ಕುಕಿ ದಂಗೆಕೋರರು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಫೋಲ್ಜಾಂಗ್ ನೆರೆಯ ಚುರಾಚಂದಪುರ ಜಿಲ್ಲೆಯಲ್ಲಿದೆ.ಮೂವರು ಮೈತೈ ಸಮುದಾಯದ  ಹತ್ಯೆಯಲ್ಲಿ ಕುಕಿ ದಂಗೆಕೋರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿಗಳಿಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಅಸ್ಸಾಂ ರೈಫಲ್ಸ್ ಘಟಕ ಅನುವು ಮಾಡಿಕೊಟ್ಟಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇ 3 ರಿಂದ ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದಾಗಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭದ್ರತಾ ತಂಡಗಳ ನಿಯೋಜನೆಯ ಹೊರತಾಗಿಯೂ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...