HomeUncategorizedಮಣಿಪುರ ಅಂತಿಮ ಮತದಾರರ ಪಟ್ಟಿ ಪ್ರಕಟ; ಮತದಾರರ ಸಂಖ್ಯೆಯಲ್ಲಿ ಇಳಿಕೆ

ಮಣಿಪುರ ಅಂತಿಮ ಮತದಾರರ ಪಟ್ಟಿ ಪ್ರಕಟ; ಮತದಾರರ ಸಂಖ್ಯೆಯಲ್ಲಿ ಇಳಿಕೆ

- Advertisement -
- Advertisement -

ಸೋಮವಾರ ಪ್ರಕಟವಾದ ಈಶಾನ್ಯ ರಾಜ್ಯದ ಅಂತಿಮ ಮತದಾರರ ಪಟ್ಟಿಯಂತೆ, ಕಳೆದ ಒಂದು ವರ್ಷದಿಂದ ಜನಾಂಗೀಯ ಬೇಗುದಿಯಲ್ಲಿ ಬೇಯುತ್ತಿರುವ ಮಣಿಪುರದಲ್ಲಿ ಮಹಿಳಾ ಮತದಾರರು ಪುರುಷರಿಗಿಂತ 67,028 ರಷ್ಟು ಹೆಚ್ಚಿದ್ದಾರೆ. 2023ರ ಅಂತಿಮ ಮತದಾರರ ಪಟ್ಟಿಗೆ ಹೋಲಿಸಿದರೆ 31,231 ಮತದಾರರ ಇಳಿಕೆಯನ್ನು ತೋರಿಸಿದೆ. ಎರಡು ವರ್ಷಗಳ ಅಂತಿಮ ಮತದಾರರ ಪಟ್ಟಿಗಳ ಪ್ರಕಾರ 2023ರಲ್ಲಿ ಮತದಾರರ ಸಂಖ್ಯೆ 20,57,854 ಆಗಿದ್ದರೆ, ಅದು ಈಗ 20,26,623 ಆಗಿದೆ.

2024ರ ಅಂತಿಮ ಪಟ್ಟಿಯ ಪ್ರಕಾರ ಮಣಿಪುರದಲ್ಲಿ 9,79,678 ಪುರುಷರು, 10,46,706 ಮಹಿಳೆಯರು ಮತ್ತು 239 ತೃತೀಯಲಿಂಗಿ ಮತದಾರರೊಂದಿಗೆ 20,26,623 ಮತದಾರರು ದಾಖಲಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರದೀಪ್ ಕುಮಾರ್ ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೊಸದಾಗಿ ಸೇರ್ಪಡೆಗೊಂಡ ಒಟ್ಟು ಮತದಾರರ ಸಂಖ್ಯೆ 34,700 ಆಗಿದ್ದು, 15,596 ಪುರುಷರು, 19,095 ಮಹಿಳೆಯರು ಮತ್ತು ಒಂಬತ್ತು ತೃತೀಯಲಿಂಗಿ ಮತದಾರರಿದ್ದಾರೆ. ಪರಿಷ್ಕರಣೆ ಅವಧಿಯಲ್ಲಿ 16,509 ಹೆಸರುಗಳನ್ನು ಪಟ್ಟಿಯಿಂದ ಅಳಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇಂಫಾಲ್ ಪಶ್ಚಿಮ ಜಿಲ್ಲೆ ಅತಿ ಹೆಚ್ಚು ಮತದಾರರನ್ನು (3,81,005) ದಾಖಲಿಸಿದ್ದು, ನಂತರ ಸ್ಥಾನದಲ್ಲಿ (3,23,844) ಇಂಫಾಲ್ ಪೂರ್ವ ಜಿಲ್ಲೆಯಿದೆ. ಜಿರಿಬಾಮ್ ಜಿಲ್ಲೆ ಅತ್ಯಂತ ಕಡಿಮೆ ಮತದಾರರನ್ನು (30,776) ಹೊಂದಿದೆ.

ಇದನ್ನೂ ಓದಿ; ರಾಜ್ಯದ ಮತದಾರರ ಅಂತಿಮ ಪಟ್ಟಿ ಪ್ರಕಟ: ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...