Homeಮುಖಪುಟಮಣಿಪುರ: ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷದ ಐವರ ಬಂಧನ; 328 ಬಂದೂಕುಗಳು, 9000 ಮದ್ದುಗುಂಡುಗಳು ವಶ

ಮಣಿಪುರ: ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷದ ಐವರ ಬಂಧನ; 328 ಬಂದೂಕುಗಳು, 9000 ಮದ್ದುಗುಂಡುಗಳು ವಶ

- Advertisement -
- Advertisement -

ಇಂಫಾಲ್: ಮಣಿಪುರ ಭದ್ರತಾ ಪಡೆಗಳು 5 ಜಿಲ್ಲೆಗಳಲ್ಲಿ ನಡೆಸಿದ ದಾಳಿಯಲ್ಲಿ ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF), ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ಶನಿವಾರ ಮಣಿಪುರದ ಐದು ಇಂಫಾಲ್ ಕಣಿವೆಯ ಜಿಲ್ಲೆಗಳಲ್ಲಿ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಸಂಗ್ರಹದ ಜೊತೆಗೆ 328 ರೈಫಲ್‌ಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಂಡಿವೆ.

ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷ (ನೊಯೋನ್) ಪ್ರಿಪಾಕ್ (ಪಿ ಆರ್ ಇ ಪಿಎಕೆ)ನ ಐವರು ಸದಸ್ಯರನ್ನು ಭಾರತ-ಮ್ಯಾನ್ಯಾರ್ ಗಡಿಯ ಶಾಂಗ್ ಟಾಂಗ್‌ ನಲ್ಲಿ ಬಂಧಿಸಲಾಗಿದೆ. ಇಂಫಾಲ್ ಉತ್ತರ ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಭದ್ರತಾ ಪಡೆಗಳು ಮೂರು ವೆಹಿಕ್ಯುಲರ್ ರೇಡಿಯೋ ಸಲಕರಣೆ,  13 ವೈರ್ ಲೆಸ್, ಏಳು ವೈರ್ ಲೆಸ್ ಆಂಟೆನಾ ಮತ್ತಿತರ ಸಾಧನಗಳನ್ನು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 13-14ರ ಮಧ್ಯರಾತ್ರಿ ಗುಪ್ತಚರ ನೇತೃತ್ವದ ದಾಳಿಗಳನ್ನು ಐದು ಕಣಿವೆ ಜಿಲ್ಲೆಗಳಾದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಾಕ್ಚಿಂಗ್ ಮತ್ತು ತೌಬಲ್ ಹೊರವಲಯದಲ್ಲಿ ನಡೆಸಲಾಗಿತ್ತು. ಜಂಟಿ ತಂಡಗಳು ಸ್ಫೋಟಕಗಳು ಮತ್ತು ಇತರ ಯುದ್ಧೋಚಿತ ಸಾಮಗ್ರಿಗಳನ್ನು ವಶಪಡಿಸಿಕೊಂಡಿವೆ. 151 ಎಸ್‌ಎಲ್‌ಆರ್ ರೈಫಲ್, 65 ಇನ್ಸಾಸ್ ರೈಫಲ್‌ಗಳು, ಇತರ ರೀತಿಯ 73 ರೈಫಲ್‌ಗಳು, 5 ಕಾರ್ಬೈನ್ ಗನ್, 2 ಎಂಪಿ-5 ಗನ್ ಸೇರಿದಂತೆ ಒಟ್ಟು 328 ಬಂದೂಕುಗಳು ಮತ್ತು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸ್ ಎಡಿಜಿಪಿ ಲಾರಿ ದೋರ್ಜಿ ಲಟೂ ಹೇಳಿದರು.

ಯಾವ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ?
151 ಎಸ್‌ಎಲ್‌ಆರ್ ರೈಫಲ್‌ಗಳು, 65 ಐಎನ್‌ಎಸ್‌ಎಎಸ್ ರೈಫಲ್‌ಗಳು, 73 ಇತರ ರೈಫಲ್‌ಗಳು, ಐದು ಕಾರ್ಬೈನ್ ಗನ್‌ಗಳು, ಎರಡು ಎಂಪಿ 5 ಗನ್‌ಗಳು, 12 ಲೈಟ್ ಮೆಷಿನ್ ಗನ್‌ಗಳು, ಆರು ಎಕೆ ಸರಣಿ ರೈಫಲ್‌ಗಳು, ಎರಡು ಅಮೋಘ್ ರೈಫಲ್‌ಗಳು, ಒಂದು ಮಾರ್ಟರ್, ಆರು ಪಿಸ್ತೂಲ್‌ಗಳು, ಒಂದು ಎಆರ್-15 ಮತ್ತು ಎರಡು ಫ್ಲೇರ್ ಗನ್‌ಗಳು ವಶಪಡಿಸಿಕೊಂಡ ಸ್ಪೋಟಕಗಳಲ್ಲಿ ಸೇರಿವೆ.

ಒಟ್ಟು 328 ರೈಫಲ್‌ಗಳು ಮತ್ತು ಬಂದೂಕುಗಳ ಜೊತೆಗೆ, ಭದ್ರತಾ ಪಡೆಗಳು 591 ವಿವಿಧ ಮ್ಯಾಗಜೀನ್‌ಗಳು, 3,534 ಎಸ್‌ಎಲ್‌ಆರ್ ಮದ್ದುಗುಂಡುಗಳು, 2,186 ಐಎನ್‌ಎಸ್‌ಎಎಸ್ ಮದ್ದುಗುಂಡುಗಳು, .303 ರೈಫಲ್‌ಗಳ 2,252 ಮದ್ದುಗುಂಡುಗಳು, 234 ಎಕೆ ಮದ್ದುಗುಂಡುಗಳು, 407 ಅಮೋಘ್ ಮದ್ದುಗುಂಡುಗಳು, 20 9-ಎಂಎಂ ಪಿಸ್ತೂಲ್ ಮದ್ದುಗುಂಡುಗಳು, 10 ಗ್ರೆನೇಡ್‌ಗಳು, ಮೂರು ಲ್ಯಾಥೋಡ್‌ಗಳು ಮತ್ತು ಏಳು ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಹಜ ಸ್ಥಿತಿಯನ್ನು ಮರುತರಲು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ನಾಗರಿಕರು ಮತ್ತು ಅವರ ಆಸ್ತಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮಣಿಪುರ ಪೊಲೀಸರು, ಭದ್ರತಾ ಪಡೆಗಳು ನಡೆಸಿದ ಪ್ರಮುಖ ಸಾಧನೆಯಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.

ಶಾಂತಿಯುತ ಮತ್ತು ಸುರಕ್ಷಿತ ಮಣಿಪುರಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಸಾರ್ವಜನಿಕರು ಪೊಲೀಸ್ ಮತ್ತು ಭದ್ರತಾ ಪಡೆಗಳೊಂದಿಗೆ ಸಹಕರಿಸಬೇಕು ಮತ್ತು ಅಕ್ರಮ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಅಥವಾ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆ ಅಥವಾ ಕೇಂದ್ರ ನಿಯಂತ್ರಣ ಕೊಠಡಿಗೆ ವರದಿ ಮಾಡಬೇಕು ಎಂದು ಅವರು ಕೋರಿದರು.

2023ರಲ್ಲಿ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ-ಜೋ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಾಗ ಉದ್ವಿಗ್ನತೆ ಹೆಚ್ಚಾಯಿತು. ಆಗ ನಡೆದ ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರವು ಫೆಬ್ರವರಿ 13ರಂದು ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿತ್ತು. 2027ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿಡಲಾಗಿದೆ.

ಏತನ್ಮಧ್ಯೆ, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಕೆಲ ದಿನಗಳ ಹಿಂದೆ ಮೈತೇಯಿ ಸಂಘಟನೆಯ ಅರಾಂಬೈ ಟೆಂಗೋಲ್ ನಾಯಕರ ಬಂಧನದ ವಿರುದ್ಧ ಮಣಿಪುರದಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಆಡಳಿತವು ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

2023ರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಐವರು ನಾಯಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...