Homeಮುಖಪುಟಮಣಿಪುರ: ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷದ ಐವರ ಬಂಧನ; 328 ಬಂದೂಕುಗಳು, 9000 ಮದ್ದುಗುಂಡುಗಳು ವಶ

ಮಣಿಪುರ: ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷದ ಐವರ ಬಂಧನ; 328 ಬಂದೂಕುಗಳು, 9000 ಮದ್ದುಗುಂಡುಗಳು ವಶ

- Advertisement -
- Advertisement -

ಇಂಫಾಲ್: ಮಣಿಪುರ ಭದ್ರತಾ ಪಡೆಗಳು 5 ಜಿಲ್ಲೆಗಳಲ್ಲಿ ನಡೆಸಿದ ದಾಳಿಯಲ್ಲಿ ಮಣಿಪುರ ಪೊಲೀಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF), ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಜಂಟಿ ತಂಡಗಳು ಶನಿವಾರ ಮಣಿಪುರದ ಐದು ಇಂಫಾಲ್ ಕಣಿವೆಯ ಜಿಲ್ಲೆಗಳಲ್ಲಿ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಸಂಗ್ರಹದ ಜೊತೆಗೆ 328 ರೈಫಲ್‌ಗಳು ಮತ್ತು ಬಂದೂಕುಗಳನ್ನು ವಶಪಡಿಸಿಕೊಂಡಿವೆ.

ಕಂಗ್ಲಿಪಾಕ್ ಕಮ್ಯುನಿಷ್ಟ್ ಪಕ್ಷ (ನೊಯೋನ್) ಪ್ರಿಪಾಕ್ (ಪಿ ಆರ್ ಇ ಪಿಎಕೆ)ನ ಐವರು ಸದಸ್ಯರನ್ನು ಭಾರತ-ಮ್ಯಾನ್ಯಾರ್ ಗಡಿಯ ಶಾಂಗ್ ಟಾಂಗ್‌ ನಲ್ಲಿ ಬಂಧಿಸಲಾಗಿದೆ. ಇಂಫಾಲ್ ಉತ್ತರ ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಭದ್ರತಾ ಪಡೆಗಳು ಮೂರು ವೆಹಿಕ್ಯುಲರ್ ರೇಡಿಯೋ ಸಲಕರಣೆ,  13 ವೈರ್ ಲೆಸ್, ಏಳು ವೈರ್ ಲೆಸ್ ಆಂಟೆನಾ ಮತ್ತಿತರ ಸಾಧನಗಳನ್ನು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 13-14ರ ಮಧ್ಯರಾತ್ರಿ ಗುಪ್ತಚರ ನೇತೃತ್ವದ ದಾಳಿಗಳನ್ನು ಐದು ಕಣಿವೆ ಜಿಲ್ಲೆಗಳಾದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಕಾಕ್ಚಿಂಗ್ ಮತ್ತು ತೌಬಲ್ ಹೊರವಲಯದಲ್ಲಿ ನಡೆಸಲಾಗಿತ್ತು. ಜಂಟಿ ತಂಡಗಳು ಸ್ಫೋಟಕಗಳು ಮತ್ತು ಇತರ ಯುದ್ಧೋಚಿತ ಸಾಮಗ್ರಿಗಳನ್ನು ವಶಪಡಿಸಿಕೊಂಡಿವೆ. 151 ಎಸ್‌ಎಲ್‌ಆರ್ ರೈಫಲ್, 65 ಇನ್ಸಾಸ್ ರೈಫಲ್‌ಗಳು, ಇತರ ರೀತಿಯ 73 ರೈಫಲ್‌ಗಳು, 5 ಕಾರ್ಬೈನ್ ಗನ್, 2 ಎಂಪಿ-5 ಗನ್ ಸೇರಿದಂತೆ ಒಟ್ಟು 328 ಬಂದೂಕುಗಳು ಮತ್ತು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸ್ ಎಡಿಜಿಪಿ ಲಾರಿ ದೋರ್ಜಿ ಲಟೂ ಹೇಳಿದರು.

ಯಾವ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ?
151 ಎಸ್‌ಎಲ್‌ಆರ್ ರೈಫಲ್‌ಗಳು, 65 ಐಎನ್‌ಎಸ್‌ಎಎಸ್ ರೈಫಲ್‌ಗಳು, 73 ಇತರ ರೈಫಲ್‌ಗಳು, ಐದು ಕಾರ್ಬೈನ್ ಗನ್‌ಗಳು, ಎರಡು ಎಂಪಿ 5 ಗನ್‌ಗಳು, 12 ಲೈಟ್ ಮೆಷಿನ್ ಗನ್‌ಗಳು, ಆರು ಎಕೆ ಸರಣಿ ರೈಫಲ್‌ಗಳು, ಎರಡು ಅಮೋಘ್ ರೈಫಲ್‌ಗಳು, ಒಂದು ಮಾರ್ಟರ್, ಆರು ಪಿಸ್ತೂಲ್‌ಗಳು, ಒಂದು ಎಆರ್-15 ಮತ್ತು ಎರಡು ಫ್ಲೇರ್ ಗನ್‌ಗಳು ವಶಪಡಿಸಿಕೊಂಡ ಸ್ಪೋಟಕಗಳಲ್ಲಿ ಸೇರಿವೆ.

ಒಟ್ಟು 328 ರೈಫಲ್‌ಗಳು ಮತ್ತು ಬಂದೂಕುಗಳ ಜೊತೆಗೆ, ಭದ್ರತಾ ಪಡೆಗಳು 591 ವಿವಿಧ ಮ್ಯಾಗಜೀನ್‌ಗಳು, 3,534 ಎಸ್‌ಎಲ್‌ಆರ್ ಮದ್ದುಗುಂಡುಗಳು, 2,186 ಐಎನ್‌ಎಸ್‌ಎಎಸ್ ಮದ್ದುಗುಂಡುಗಳು, .303 ರೈಫಲ್‌ಗಳ 2,252 ಮದ್ದುಗುಂಡುಗಳು, 234 ಎಕೆ ಮದ್ದುಗುಂಡುಗಳು, 407 ಅಮೋಘ್ ಮದ್ದುಗುಂಡುಗಳು, 20 9-ಎಂಎಂ ಪಿಸ್ತೂಲ್ ಮದ್ದುಗುಂಡುಗಳು, 10 ಗ್ರೆನೇಡ್‌ಗಳು, ಮೂರು ಲ್ಯಾಥೋಡ್‌ಗಳು ಮತ್ತು ಏಳು ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸಹಜ ಸ್ಥಿತಿಯನ್ನು ಮರುತರಲು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ನಾಗರಿಕರು ಮತ್ತು ಅವರ ಆಸ್ತಿಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮಣಿಪುರ ಪೊಲೀಸರು, ಭದ್ರತಾ ಪಡೆಗಳು ನಡೆಸಿದ ಪ್ರಮುಖ ಸಾಧನೆಯಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.

ಶಾಂತಿಯುತ ಮತ್ತು ಸುರಕ್ಷಿತ ಮಣಿಪುರಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಸಾರ್ವಜನಿಕರು ಪೊಲೀಸ್ ಮತ್ತು ಭದ್ರತಾ ಪಡೆಗಳೊಂದಿಗೆ ಸಹಕರಿಸಬೇಕು ಮತ್ತು ಅಕ್ರಮ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಅಥವಾ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆ ಅಥವಾ ಕೇಂದ್ರ ನಿಯಂತ್ರಣ ಕೊಠಡಿಗೆ ವರದಿ ಮಾಡಬೇಕು ಎಂದು ಅವರು ಕೋರಿದರು.

2023ರಲ್ಲಿ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ-ಜೋ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಾಗ ಉದ್ವಿಗ್ನತೆ ಹೆಚ್ಚಾಯಿತು. ಆಗ ನಡೆದ ಹಿಂಸಾಚಾರದಲ್ಲಿ 260ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರವು ಫೆಬ್ರವರಿ 13ರಂದು ಈಶಾನ್ಯ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿತ್ತು. 2027ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿಡಲಾಗಿದೆ.

ಏತನ್ಮಧ್ಯೆ, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ.

ಕೆಲ ದಿನಗಳ ಹಿಂದೆ ಮೈತೇಯಿ ಸಂಘಟನೆಯ ಅರಾಂಬೈ ಟೆಂಗೋಲ್ ನಾಯಕರ ಬಂಧನದ ವಿರುದ್ಧ ಮಣಿಪುರದಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಆಡಳಿತವು ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

2023ರ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಐವರು ನಾಯಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...