Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....