Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...