Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...