Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...