Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...