Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...