Homeಮುಖಪುಟಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ - ವರದಿ

ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ – ವರದಿ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಮೂವರನ್ನು ನದಿಗೆ ಎಸೆಯುವ ಮೊದಲು, ಅವರಿಗೆ ಹಲವು ಬಾರಿ ಗುಂಡು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಗಳು ಸೂಚಿಸಿವೆ ಎಂದು ದಿ ಹಿಂದೂ ಭಾನುವಾರ ವರದಿ ಮಾಡಿದೆ.

ನವೆಂಬರ್ 11 ರಂದು, ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿ ಭುಗಿಲೆದ್ದ ಹಿಂಸಾಚಾರದ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 6 ಜನರು ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದರು. ಆರು ವ್ಯಕ್ತಿಗಳನ್ನು ಶಸ್ತ್ರಸಜ್ಜಿತ ಹ್ಮಾರ್ ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಮೈತೇಯಿ ಗುಂಪುಗಳು ಆರೋಪಿಸಿದ್ದವು. ಅಪಹರಣಕ್ಕೊಳಗಾಗಿದ್ದ ಮೈತೇಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಶವಗಳು ನವೆಂಬರ್ 15 ಮತ್ತು ನವೆಂಬರ್ 18 ರ ನಡುವೆ ಜಿರಿ ಮತ್ತು ಬರಾಕ್ ನದಿಗಳಲ್ಲಿ ತೇಲುತ್ತಿದ್ದವು. ಮೂರು ವರ್ಷದ ಚಿಂಗ್‌ಖೀಂಗನ್‌ಬಾ ಸಿಂಗ್, ಅವರ ತಾಯಿ ಎಲ್ ಹೈಟೊನ್ಬಿ ದೇವಿ(25), ಮತ್ತು ಅಜ್ಜಿ ವೈ ರಾಣಿ ದೇವಿ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪ್ರತಿಯೊಬ್ಬರಿಗೂ ಗುಂಡು ಹಾರಿಸಲಾಗಿದೆ ಎಂದು ಸೂಚಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೂರು ವರ್ಷದ ಮಗು ಚಿಂಗ್‌ಖೀಂಗನ್‌ಬಾ ಸಿಂಗ್ ಅವರ ಗಲ್ಲದ ಮೇಲೆ ಗುಂಡಿನ ಗಾಯ ಇದೆ ಎಂದು ವರದಿಯು ಹೇಳಿದೆ. ಅವರ ತಾಯಿ ಹೈಟೋನ್ಬಿ ದೇವಿ ಅವರ ಬೆನ್ನಿನ ಮೇಲೆ ಎರಡು ಗುಂಡುಗಳ ಗಾಯಗಳಾಗಿದ್ದರೆ, ಅವರ ಅಜ್ಜಿ ವೈ ರಾಣಿ ದೇವಿ ಮೇಲೆ ಐದು ಬುಲೆಟ್‌ಗಳ ಗಾಯಗಳು ಆಗಿವೆ ಎಂದು ವರದಿಗಳು ತಿಳಿಸಿವೆ.

ಅವರನ್ನು ಅಪಹರಿಸಿದ ದಿನ, ಶಂಕಿತ ಕುಕಿ ಉಗ್ರಗಾಮಿಗಳು ಜಕುರಾಧೋರ್‌ನಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಫೋರ್ಸ್ ಪೋಸ್ಟ್‌ನ ಮೇಲೆ ದಾಳಿ ನಡೆಸಿದ್ದರು. ಇದರ ನಂತರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ತು ಶಂಕಿತ ಉಗ್ರರು ಕೊಲ್ಲಲ್ಪಟ್ಟಿದ್ದಾರೆ.

ಆದಾಗ್ಯೂ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಗ್ರಾಮದ ಸ್ವಯಂಸೇವಕರು ಎಂದು ಕುಕಿ ಸಂಘಟನೆಗಳು ಹೇಳಿಕೊಂಡಿವೆ. ಮೇ 2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಹಳ್ಳಿಗಳನ್ನು ಕಾವಲು ಕಾಯುತ್ತಿರುವ ಶಸ್ತ್ರಸಜ್ಜಿತ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ.

ನವೆಂಬರ್‌ನಲ್ಲಿ ಮಣಿಪುರದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, ನವೆಂಬರ್ 7 ರಿಂದ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್‌ಗಳ ನಡುವಿನ ಘರ್ಷಣೆಗಳಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...