Homeಮುಖಪುಟಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ - ವರದಿ

ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಸದಸ್ಯರ ಮೇಲೆ ಗುಂಡು ಹಾರಿಸಿ ಹತ್ಯೆ – ವರದಿ

- Advertisement -
- Advertisement -

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳಿಂದ ಅಪಹರಣಕ್ಕೊಳಗಾಗಿದ್ದ ಮೈತೇಯಿ ಕುಟುಂಬದ ಮೂವರನ್ನು ನದಿಗೆ ಎಸೆಯುವ ಮೊದಲು, ಅವರಿಗೆ ಹಲವು ಬಾರಿ ಗುಂಡು ಹಾರಿಸಲಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಗಳು ಸೂಚಿಸಿವೆ ಎಂದು ದಿ ಹಿಂದೂ ಭಾನುವಾರ ವರದಿ ಮಾಡಿದೆ.

ನವೆಂಬರ್ 11 ರಂದು, ಜಕುರಾಧೋರ್ ಕರೋಂಗ್ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿ ಭುಗಿಲೆದ್ದ ಹಿಂಸಾಚಾರದ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 6 ಜನರು ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದರು. ಆರು ವ್ಯಕ್ತಿಗಳನ್ನು ಶಸ್ತ್ರಸಜ್ಜಿತ ಹ್ಮಾರ್ ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಮೈತೇಯಿ ಗುಂಪುಗಳು ಆರೋಪಿಸಿದ್ದವು. ಅಪಹರಣಕ್ಕೊಳಗಾಗಿದ್ದ ಮೈತೇಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಶವಗಳು ನವೆಂಬರ್ 15 ಮತ್ತು ನವೆಂಬರ್ 18 ರ ನಡುವೆ ಜಿರಿ ಮತ್ತು ಬರಾಕ್ ನದಿಗಳಲ್ಲಿ ತೇಲುತ್ತಿದ್ದವು. ಮೂರು ವರ್ಷದ ಚಿಂಗ್‌ಖೀಂಗನ್‌ಬಾ ಸಿಂಗ್, ಅವರ ತಾಯಿ ಎಲ್ ಹೈಟೊನ್ಬಿ ದೇವಿ(25), ಮತ್ತು ಅಜ್ಜಿ ವೈ ರಾಣಿ ದೇವಿ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಪ್ರತಿಯೊಬ್ಬರಿಗೂ ಗುಂಡು ಹಾರಿಸಲಾಗಿದೆ ಎಂದು ಸೂಚಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮೂರು ವರ್ಷದ ಮಗು ಚಿಂಗ್‌ಖೀಂಗನ್‌ಬಾ ಸಿಂಗ್ ಅವರ ಗಲ್ಲದ ಮೇಲೆ ಗುಂಡಿನ ಗಾಯ ಇದೆ ಎಂದು ವರದಿಯು ಹೇಳಿದೆ. ಅವರ ತಾಯಿ ಹೈಟೋನ್ಬಿ ದೇವಿ ಅವರ ಬೆನ್ನಿನ ಮೇಲೆ ಎರಡು ಗುಂಡುಗಳ ಗಾಯಗಳಾಗಿದ್ದರೆ, ಅವರ ಅಜ್ಜಿ ವೈ ರಾಣಿ ದೇವಿ ಮೇಲೆ ಐದು ಬುಲೆಟ್‌ಗಳ ಗಾಯಗಳು ಆಗಿವೆ ಎಂದು ವರದಿಗಳು ತಿಳಿಸಿವೆ.

ಅವರನ್ನು ಅಪಹರಿಸಿದ ದಿನ, ಶಂಕಿತ ಕುಕಿ ಉಗ್ರಗಾಮಿಗಳು ಜಕುರಾಧೋರ್‌ನಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಫೋರ್ಸ್ ಪೋಸ್ಟ್‌ನ ಮೇಲೆ ದಾಳಿ ನಡೆಸಿದ್ದರು. ಇದರ ನಂತರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ತು ಶಂಕಿತ ಉಗ್ರರು ಕೊಲ್ಲಲ್ಪಟ್ಟಿದ್ದಾರೆ.

ಆದಾಗ್ಯೂ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಗ್ರಾಮದ ಸ್ವಯಂಸೇವಕರು ಎಂದು ಕುಕಿ ಸಂಘಟನೆಗಳು ಹೇಳಿಕೊಂಡಿವೆ. ಮೇ 2023 ರಲ್ಲಿ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಹಳ್ಳಿಗಳನ್ನು ಕಾವಲು ಕಾಯುತ್ತಿರುವ ಶಸ್ತ್ರಸಜ್ಜಿತ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ.

ನವೆಂಬರ್‌ನಲ್ಲಿ ಮಣಿಪುರದಲ್ಲಿ ಹಿಂಸಾಚಾರದಲ್ಲಿ ಏರಿಕೆ ಕಂಡುಬಂದಿದ್ದು, ನವೆಂಬರ್ 7 ರಿಂದ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಲ್ಲಿ ಮೈತೇಯಿ ಮತ್ತು ಕುಕಿ-ಝೋ-ಹ್ಮಾರ್‌ಗಳ ನಡುವಿನ ಘರ್ಷಣೆಗಳಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ವಕ್ಫ್ ಮಸೂದೆ ವಿರುದ್ಧ ನಿರ್ಣಯ ಮಂಡಿಸಲಾಗುವುದು ಎಂದ ಪಶ್ಚಿಮ ಬಂಗಾಳ ಸಚಿವರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...