Homeಮುಖಪುಟಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ...

ಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ ಸರ್ಕಾರ

- Advertisement -
- Advertisement -

ಮಣಿಪುರದ ಕಣಿವೆ ಪ್ರದೇಶಗಳ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯನ್ನು (AFSPA) ಮರು ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಗುರುವಾರ ಆದೇಶ ಹೊರಡಿಸಿದೆ. ಸುಮಾರು 19 ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಹಿನ್ನಲೆ ಈ ಪ್ರದೇಶಗಳನ್ನು ಕಾಯಿದೆ ಜಾರಿಯಾಗುವಂತೆ ‘ಅಡಚಣೆಯ ಪ್ರದೇಶಗಳು’ (Disturbed Areas)’ ಎಂದು ಘೋಷಿಸಲಾಗಿದೆ. ಮಣಿಪುರ

ರಾಜ್ಯದ ಮೈತೇಯಿ ಪ್ರಾಬಲ್ಯವಿರುವ ಕಣಿವೆ ಪ್ರದೇಶಗಳಲ್ಲಿನ 19 ಪೊಲೀಸ್ ಠಾಣೆಗಳನ್ನು ಹೊರತುಪಡಿಸಿ ಮಣಿಪುರದಾದ್ಯಂತ ಜಾರಿಯಲ್ಲಿದ್ದ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಿತಿಯನ್ನು ಈಗ ವಿಸ್ತರಿಸಲಾಗಿದೆ. ಇಂಫಾಲ್ ಪಶ್ಚಿಮದ ಸೆಕ್ಮಾಯಿ ಮತ್ತು ಲಮ್ಸಾಂಗ್ ಪೊಲೀಸ್ ಠಾಣೆಗಳು, ಇಂಫಾಲ್ ಪೂರ್ವದ ಲಾಮ್ಲೈ, ಬಿಷ್ಣುಪುರದಲ್ಲಿ ಮೊಯಿರಾಂಗ್, ಲೀಮಾಖೋಂಗ್ ಕಾಂಗ್ಪೊಕ್ಪಿ, ಮತ್ತು ಜಿರಿಬಾಮ್ ಪೊಲೀಸ್ ಠಾಣೆ ಈ ವಿಸ್ತರಣೆಯಲ್ಲಿ ಸೇರಿದೆ ಎಂದು ಅಧಿಸೂಚನೆಯಲ್ಲಿ ಗೃಹ ಸಚಿವಾಲಯ ಹೇಳಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಕಾನೂನು ಅಥವಾ ಸುವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು ಅಥವಾ ಬಲವನ್ನು ಪ್ರಯೋಗಿಸಲು ಸಶಸ್ತ್ರ ಪಡೆಗಳ ಅಧಿಕಾರಿಗೆ AFSPA ಕಾಯಿದೆಯು ಅಧಿಕಾರ ನೀಡುತ್ತದೆ. ಗುಂಡು ಹಾರಿಸುವಾಗ ವ್ಯಕ್ತಿಯು ಸಾವಿಗೀಡಾದರೂ ಕೂಡಾ ಕಾಯಿದೆಯು ಗುಂಡು ಹಾರಿಸಲು ಪಡೆಗಳಿಗೆ ಅಧಿಕಾರ ನೀಡುತ್ತದೆ. ಅದೇ ವೇಳೆ ಕಾಯಿದೆಯ ಅಡಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಯನ್ನು ಕಾನೂನು ಕ್ರಮದಿಂದ ಕಾಯಿದೆಯು ರಕ್ಷಿಸುತ್ತದೆ.

ಭದ್ರತಾ ಪರಿಸ್ಥಿತಿಯನ್ನು ಕಾಪಾಡಿಕೊಳ್ಳಲು ಈ ಆರು ಪ್ರದೇಶಗಳಲ್ಲಿ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಾನಮಾನವನ್ನು ಹೇರಲಾಗುತ್ತಿದೆ. ಜೊತೆಗೆ ಈ ಪ್ರದೇಶಗಳಲ್ಲಿ ದಂಗೆಕೋರ ಗುಂಪುಗಳ ಚಟುವಟಿಕೆಗಳನ್ನು ನಿಗ್ರಹಿಸಲು ಭದ್ರತಾ ಪಡೆಗಳ ಸುಸಂಘಟಿತ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಇದನ್ನು ಖಾತರಿಪಡಿಸಲಾಗಿದೆ ಎಂದು ಅದು ಹೇಳಿದೆ.

1980 ರಿಂದ ಮಣಿಪುರವು AFSPA ಅಡಿಯಲ್ಲಿ ‘ಡಿಸ್ಟರ್ಬ್ಡ್ ಏರಿಯಾ’ ಸ್ಥಾನಮಾನವನ್ನು ಹೊಂದಿದೆ. 2004 ರಲ್ಲಿ 32 ವರ್ಷದ ತಂಗ್ಜಮ್ ಮನೋರಮಾ ಹತ್ಯೆಯ ನಂತರ ಇಂಫಾಲ್ನ ಕೆಲವು ಭಾಗಗಳಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು. 2022 ರಿಂದ, ‘ಡಿಸ್ಟರ್ಬ್ಡ್ ಏರಿಯಾ’ ಎಂದು ಸೂಚಿಸಲಾದ ಪ್ರದೇಶಗಳನ್ನು ಹೆಚ್ಚಿಸಲಾಗಿದ್ದು, ಏಪ್ರಿಲ್ 1, 2023 ರಿಂದ ಜಾರಿಗೆ ತರಲಾಗಿತ್ತು. ಆದರೆ ಮೈತೇಯಿ ಪ್ರಾಬಲ್ಯದ ಕಣಿವೆಯ 19 ಪೊಲೀಸ್ ಠಾಣೆಗಳನ್ನು ಈ ವ್ಯಾಪ್ತಿಯಿಂದ ಹಿಂತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...