Homeಮುಖಪುಟಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17) ವರದಿ ಮಾಡಿದೆ.

ತನ್ನ ಮೇಲೆ ನಡೆದ ದೌರ್ಜನ್ಯದಿಂದ ಉಂಟಾದ ದೈಹಿಕ ಗಾಯ ಮತ್ತು ಮಾನಸಿಕ ಆಘಾತದಿಂದ ಆಕೆ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ ಎಂದು ಕುಟುಂಬಸ್ಥರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಮೇ 15, 2023ರಂದು ಇಂಫಾಲದಲ್ಲಿ ಎಟಿಎಂನಿಂದ ಹಣ ಪಡೆಯಲು ತೆರಳಿದ್ದಾಗ ಯುವತಿಯನ್ನು ಅಪಹರಿಸಲಾಗಿತ್ತು. ಆಕೆಯ ಹೇಳಿಕೆಯ ಪ್ರಕಾರ, ಹಲವು ಗಂಟೆಗಳ ಕಾಲ ಇಂಫಾಲ ನಗರದ ಹಲವು ಕಡೆಗಳಲ್ಲಿ ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಗುಂಪು ಗುಂಪಾಗಿ ಪುರುಷರು ಆಕೆಯನ್ನು ಬಲವಂತವಾಗಿ ವಾಹನಕ್ಕೆ ಹತ್ತಿಸಿಕೊಂಡು ಹೋಗಿದ್ದರು. ಅವರಲ್ಲಿ ಕೆಲವರು, ತೀವ್ರಗಾಮಿ ಮೈತೆಯಿ ಸಂಘಟನೆಯಾದ ‘ಆರಂಬೈ ತೆಂಗೋಲ್‌’ಗೆ ಸಂಬಂಧಿಸಿದವರೆಂದು ಆರೋಪಿಸಲಾಗಿದೆ. ಕೊನೆಗೆ ಯುವತಿ ಒಬ್ಬರು ಆಟೋ-ರಿಕ್ಷಾ ಚಾಲಕನ ಸಹಾಯದಿಂದ ತಪ್ಪಿಸಿಕೊಂಡು ಬಂದಿದ್ದರು.

ಯುವತಿಯನ್ನು ಮೊದಲು ಕಾಂಗ್ಪೋಕ್ಪಿ ಜಿಲ್ಲೆಯ ಪರಿಹಾರ ಶಿಬಿರಗಳಿಗೆ ಕರೆದೊಯ್ಯಲಾಗಿತ್ತು. ನಂತರ ಮಣಿಪುರ ಮತ್ತು ನಾಗಾಲ್ಯಾಂಡ್‌ನ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತು. ನಾವು ಸ್ವತಂತ್ರವಾಗಿ ಪರಿಶೀಲಿಸಿದ ಕೊಹಿಮಾದ ವೈದ್ಯಕೀಯ ವರದಿಯು ಆಕೆಯ ಗಾಯಗಳನ್ನು ‘ಆಕ್ರಮಣ ಮತ್ತು ಅತ್ಯಾಚಾರದ ಆರೋಪದ ಪ್ರಕರಣ’ ಎಂದು ದಾಖಲಿಸಿದೆ ಎಂದು scroll.in ವರದಿ ಮಾಡಿದೆ.

ಈ ಪ್ರಕರಣವನ್ನು ಮೊದಲು ಜೂನ್ 2023ರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿ ಮಾಡಲಾಗಿತ್ತು ಎಂದು ನ್ಯೂಸ್ ಲಾಂಡ್ರಿ ವರದಿ ಮಾಡಿದೆ.

ಜುಲೈ 2023ರಲ್ಲಿ ಯುವತಿ ಪೊಲೀಸ್ ಹೇಳಿಕೆಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸುವ ಮೊದಲು ಶೂನ್ಯ ಎಫ್‌ಐಆರ್ ದಾಖಲಿಸಲಾಗಿತ್ತು. ಅಪರಾಧ ಎಲ್ಲಿ ಸಂಭವಿಸಿದೆ ಎಂಬುವುದನ್ನು ಲೆಕ್ಕಿಸದೆ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಬಹುದು. ನಂತರ ಅದನ್ನು ಈ ವಿಷಯದ ಬಗ್ಗೆ ನ್ಯಾಯವ್ಯಾಪ್ತಿಯನ್ನು ಹೊಂದಿರುವ ಪೊಲೀಸ್ ಠಾಣೆಗೆ ವರ್ಗಾಯಿಸಬೇಕು.

ಘಟನೆ ನಡೆದು ಎರಡು ವರ್ಷಗಳಿಗೂ ಹೆಚ್ಚು ಸಮಯ ಕಳೆದರೂ, ಇದುವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ ಎಂದು ವರದಿಗಳು ಹೇಳಿವೆ.

ತನ್ನ ಮೇಲೆ ನಡೆದ ದೌರ್ಜನ್ಯದ ಆಘಾತದಿಂದಾಗಿ ನನ್ನ ಮಗಳು ಉಸಿರಾಟದ ತೊಂದರೆ, ನಿದ್ರಾಹೀನತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಳು ಎಂದು ಸಂತ್ರಸ್ತೆಯ ತಾಯಿ ಲಿಂಗ್ನೆಯ್ ಹಾವೋಕಿಪ್ ಹೇಳಿದ್ದಾಗಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

“ಕಳೆದ ಎರಡು ವರ್ಷಗಳಿಂದ ಆಕೆ ನಿರಂತರ ಭಯದಲ್ಲಿ ಬದುಕುತ್ತಿದ್ದಳು. ಆಕೆ ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ನನಗೆ ಹೇಳುತ್ತಿದ್ದಳು. ಒಮ್ಮೆ, ತನಗೆ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ಅದರಿಂದ ಆಕೆ ತುಂಬಾ ದುರ್ಬಲಳಾಗಿದ್ದಾಳೆಂದು ನನಗೆ ಹೇಳಿದ್ದಳು” ಎಂದು ಹಾವೋಕಿಪ್ ತಿಳಿಸಿದ್ದಾಗಿ ವರದಿ ಉಲ್ಲೇಖಿಸಿದೆ.

ಯುವತಿಗೆ ಸಂತಾಪ ಸೂಚಿಸಿ ಕುಕಿ-ಝೋ ಸಮುದಾಯವು ಶನಿವಾರ ಚುರಚಂದಪುರದಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿದೆ.

ಮಣಿಪುರದಲ್ಲಿ ಮೇ 2023ರಲ್ಲಿ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...